ಚಿತ್ರ ಮಂಜರಿ

ಕಾಟೇರ ಬೃಹತ್‌ ಗೆಲುವು; ಧನ್ಯವಾದ ಸಲ್ಲಿಸಿದ ತರುಣ್‌ ಸುಧೀರ್

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಹಾಗೂ ತರುಣ್‌ ಸುಧೀರ್‌ ಕಾಂಬಿನೇಶನ್‌ನ ಎರಡನೇ ಚಿತ್ರ ಕಾಟೇರ ಬಿಡುಗಡೆಗೊಂಡು ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಬಹು ದಿನಗಳ ಬಳಿಕ ದರ್ಶನ್‌ ಪ್ರತಿಭೆಗೆ ತಕ್ಕನಾದ ಚಿತ್ರ ಬಂದಿದೆ ಎಂದು ದರ್ಶನ್‌ ಅಭಿಮಾನಿಗಳು ಹಾಗೂ ಒಂದೊಳ್ಳೆ ಅಂಶ ಇರುವ ಸಿನಿಮಾ ಬಿಡುಗಡೆಯಾಗಿದೆ ಎಂದು ಸಿನಿ ರಸಿಕರು ಚಿತ್ರಮಂದಿರಗಳಿಗೆ ಲಗ್ಗೆ ಇಟ್ಟಿದ್ದಾರೆ.

ಇನ್ನು ಕಾಟೇರ ಬಿಡುಗಡೆಯಾದಾಗಿನಿಂದಲೂ ಸಹ ಒಳ್ಳೆಯ ವಿಮರ್ಶೆಗಳನ್ನು ಪಡೆದುಕೊಳ್ಳುತ್ತಾ ಬಂದಿದ್ದು, ಗಲ್ಲಾಪೆಟ್ಟಿಗೆಯಲ್ಲೂ ಸಹ ಗೆಲುವನ್ನು ಕಂಡಿದ್ದಾನೆ. ಹೀಗಾಗಿ ಕಾಟೇರ ಚಿತ್ರತಂಡ ಸಕ್ಸಸ್‌ ಮೀಟ್‌ ಕಾರ್ಯಕ್ರಮವನ್ನೂ ಸಹ ಹಂಚಿಕೊಂಡಿದ್ದು ಸಂಭ್ರಮಿಸಿದೆ. ಚಿತ್ರದ ನಿರ್ದೇಶಕ ತರುಣ್‌ ಸುಧೀರ್‌ ತಮ್ಮ ಕಾಟೇರ ಚಿತ್ರಕ್ಕೆ ಪ್ರೇಕ್ಷಕರು ನೀಡಿದ ಪ್ರತಿಕ್ರಿಯೆಗೆ ಮನಸೋತು ಟ್ವೀಟ್‌ವೊಂದನ್ನು ಮಾಡಿದ್ದು, ಚಿತ್ರಕ್ಕೆ ಬೆಂಬಲ ನೀಡಿದ ಹಾಗೂ ಮೆಚ್ಚಿಕೊಂಡ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ತರುಣ್ ಸುಧೀರ್‌ ಹಂಚಿಕೊಂಡ ಪೋಸ್ಟ್‌ ಈ ಕೆಳಕಂಡಂತಿದೆ:

ಅಭಿಮಾನಿಗಳು. ರೈತರು. ನಮ್ಮ ಕನ್ನಡ ಚಿತ್ರೋದ್ಯಮ ಮತ್ತು ಹಲವಾರು ಮನಗಳಿಗೆ ನಾವು ಸಾಕಷ್ಟು ಋಣಿಯಾಗಿದ್ದೇವೆ. ಹೊಸದೊಂದು ಕಥೆ ಹೇಳುವ ಸಲುವಾಗಿ ಶುರುವಾದ ಪ್ರಯತ್ನ. ಹಲವಾರು ದೈತ್ಯರ ಕೃಷಿ, ನಿಮ್ಮ ಕಾಟೇರ. ಇಂದು, ನಾವು ಕಲ್ಪಿಸಿಕೊಂಡದ್ದನ್ನು, ಅರಿತುಕೊಂಡಿರುವುದನ್ನು ನಿಜ ಸ್ವರೂಪದಲ್ಲಿ ಬೆಳ್ಳಿ ಪರದೆಯ ಮೇಲೆ ನೋಡಲು ಬಹಳ ಸಂತೋಷ ಮತ್ತು ಹೆಮ್ಮೆ ಅನಿಸುತ್ತಿದೆ.

ನಾನು ಹಿಂತಿರುಗಿ ನೋಡಿದಾಗ, ನನಗೆ ಕಾಣುವುದು ನಿಮ್ಮೆಲ್ಲರ ಸತತ ಪ್ರೀತಿ, ಬೆಂಬಲ ಮತ್ತು ಆಶೀರ್ವಾದ. ದರ್ಶನ್ ಸರ್, ರಾಕ್‌ಲೈನ್ ಸರ್ ಮತ್ತು ನನ್ನ ತಂಡಕ್ಕೆ ನಾನು ಎಂದೆಂದೂ ಆಭಾರಿ, ನನ್ನ ಮೇಲಿನ ನಿಮ್ಮ ಬಲವಾದ ನಂಬಿಕೆಯಿಂದ ಕಾಟೇರ ಸಾಧ್ಯವಾಯಿತು.

ಸೆಲೆಬ್ರಿಟಿಗಳು. ನೀವು ಪ್ರತಿಯೊಂದು ಹೆಜ್ಜೆಯಲ್ಲೂ ನಮಗೆ ಪ್ರೇರಣೆಯಾಗಿ ನಿಂತಿದ್ದೀರ. ನೀವು ಕಾಟೇರ ಚಿತ್ರವನ್ನು ಪ್ರೀತಿಯಿಂದ ಸ್ವಾಗತಿಸಿದ ರೀತಿ ನಮ್ಮನ್ನು ತುಂಬಾ ಭಾವುಕರನ್ನಾಗಿಸುತ್ತದೆ! ಇದಕ್ಕಿಂತ ಹೆಚ್ಚು ಇನ್ನೇನು ಕೇಳಲು ಸಾಧ್ಯ!! ಮತ್ತೊಮ್ಮೆ ಎಲ್ಲರಿಗೂ ಮನದಾಳದ ಧನ್ಯವಾದಗಳು!

ಚಿತ್ರದ ಪ್ರತಿ ಹಂತದಲ್ಲೂ ಬೆಂಬಲ ನೀಡಿದ ಮಾಧ್ಯಮ ಮಿತ್ರರಿಗೆ ವಿಶೇಷ ಧನ್ಯವಾದಗಳು ಎಲ್ಲರಿಗೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು
ಅಭಿಮಾನಿಯ ಕಾಟೇರ, ಅಭಿಮಾನಿಗಳಿಗಾಗಿ,
ನಿಮ್ಮ,
ತರುಣ್ ಕಿಶೋರ್ ಸುಧೀರ್

andolana

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

3 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

7 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

7 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

7 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

7 hours ago