ಚಿತ್ರ ಮಂಜರಿ

ಆದಿಪುರುಷ್ ಚಿತ್ರದವರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಅಮಿತ್ ಶಾಗೆ ಪತ್ರ ಬರೆದ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘ!

ನವದೆಹಲಿ: ಆದಿಪುರುಷ್ ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ಮನೋಜ್ ಮುಂತಾಶಿರ್ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ ಬರೆದಿದೆ.

ಆದಿಪುರುಷ್ ಚಿತ್ರ ಬಿಡುಗಡೆಗೊಂಡ ಪ್ರಾರಂಭದಿಂದಲೂ ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ. ಸದ್ಯ ಇದೇ ಕಾರಣವನ್ನು ಮುಂದಿಟ್ಟು ಮಾತನಾಡಿರುವ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್, ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ನಿರ್ಮಾಪಕರ ವಿರುದ್ಧ ಎಫ್​ಐಆರ್​ ದಾಖಲಿಸಲು ಆಗ್ರಹಿಸಿದೆ.

ಆದಿಪುರುಷ್​ ಚಿತ್ರದ ವಿರುದ್ಧ ಭುಗಿಲೆದ್ದಿರುವ ಆಕ್ರೋಶ, ಪ್ರತಿಭಟನೆಗಳು ಸದ್ಯ ಕೊನೆಗೊಳ್ಳುವಂತೆ ಕಾಣುತ್ತಿಲ್ಲ ಎಂಬುದು ಇತ್ತೀಚಿನ ವರದಿಗಳ ಮೂಲಕ ಸ್ಪಷ್ಟವಾಗುತ್ತಿದೆ. ಶನಿವಾರ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಚಿತ್ರತಂಡ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಮತ್ತು ಅನೇಕ ಮಲ್ಟಿಪ್ಲೆಕ್ಸ್‌ಗಳಲ್ಲಿ ರಿಯಾಯಿತಿ ಟಿಕೆಟ್‌ಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸುವ ಪ್ರಯತ್ನವನ್ನು ನಡೆಸಿದೆ. ಹಾಗಾಗಿ ಚಿತ್ರದ ನಿರ್ಮಾಪಕರ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.

ಬೇಸರ ಮೂಡಿಸುವ ವಿಎಫ್‌ಎಕ್ಸ್‌, ಸ್ವೀಕರಿಸಲಾಗದಂತ ಡೈಲಾಗ್​​ಗಳು ಆದಿಪುರುಷ್‌ ಚಿತ್ರಕ್ಕೆ ಭಾರಿ ಹಿನ್ನಡೆಯನ್ನು ನೀಡಿದೆ! ಈಗಾಗಲೇ ಸಿನಿಮಾವನ್ನು ಹಲವು ಚಿತ್ರಮಂದಿರಗಳಿಂದ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಚಿತ್ರದ ವಿರುದ್ಧ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿವೆ,

andolanait

Recent Posts

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

24 mins ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

2 hours ago

​ಮೈಸೂರು ವಿ.ವಿ | ಸಂಶೋಧಕರ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…

2 hours ago

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

4 hours ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

7 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

7 hours ago