ನವದೆಹಲಿ: ಆದಿಪುರುಷ್ ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ಮನೋಜ್ ಮುಂತಾಶಿರ್ ವಿರುದ್ಧ ಕೂಡಲೇ ಎಫ್ಐಆರ್ ದಾಖಲಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಪತ್ರ ಬರೆದಿದೆ.
ಆದಿಪುರುಷ್ ಚಿತ್ರ ಬಿಡುಗಡೆಗೊಂಡ ಪ್ರಾರಂಭದಿಂದಲೂ ಸಾಕಷ್ಟು ವಿವಾದಗಳಿಗೆ ಕಾರಣವಾಗಿದೆ. ಸದ್ಯ ಇದೇ ಕಾರಣವನ್ನು ಮುಂದಿಟ್ಟು ಮಾತನಾಡಿರುವ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್, ಚಿತ್ರದ ನಿರ್ದೇಶಕ ಓಂ ರಾವುತ್ ಮತ್ತು ನಿರ್ಮಾಪಕರ ವಿರುದ್ಧ ಎಫ್ಐಆರ್ ದಾಖಲಿಸಲು ಆಗ್ರಹಿಸಿದೆ.
ಆದಿಪುರುಷ್ ಚಿತ್ರದ ವಿರುದ್ಧ ಭುಗಿಲೆದ್ದಿರುವ ಆಕ್ರೋಶ, ಪ್ರತಿಭಟನೆಗಳು ಸದ್ಯ ಕೊನೆಗೊಳ್ಳುವಂತೆ ಕಾಣುತ್ತಿಲ್ಲ ಎಂಬುದು ಇತ್ತೀಚಿನ ವರದಿಗಳ ಮೂಲಕ ಸ್ಪಷ್ಟವಾಗುತ್ತಿದೆ. ಶನಿವಾರ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದು, ಚಿತ್ರತಂಡ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಮತ್ತು ಅನೇಕ ಮಲ್ಟಿಪ್ಲೆಕ್ಸ್ಗಳಲ್ಲಿ ರಿಯಾಯಿತಿ ಟಿಕೆಟ್ಗಳನ್ನು ಮಾರಾಟ ಮಾಡುವ ಮೂಲಕ ಹಣ ಗಳಿಸುವ ಪ್ರಯತ್ನವನ್ನು ನಡೆಸಿದೆ. ಹಾಗಾಗಿ ಚಿತ್ರದ ನಿರ್ಮಾಪಕರ ವಿರುದ್ಧ ಪ್ರಕರಣವನ್ನು ದಾಖಲಿಸುವಂತೆ ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಒತ್ತಾಯಿಸಿದೆ.
ಬೇಸರ ಮೂಡಿಸುವ ವಿಎಫ್ಎಕ್ಸ್, ಸ್ವೀಕರಿಸಲಾಗದಂತ ಡೈಲಾಗ್ಗಳು ಆದಿಪುರುಷ್ ಚಿತ್ರಕ್ಕೆ ಭಾರಿ ಹಿನ್ನಡೆಯನ್ನು ನೀಡಿದೆ! ಈಗಾಗಲೇ ಸಿನಿಮಾವನ್ನು ಹಲವು ಚಿತ್ರಮಂದಿರಗಳಿಂದ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗಿದ್ದು, ಚಿತ್ರದ ವಿರುದ್ಧ ವ್ಯಾಪಕ ವಿರೋಧಗಳು ವ್ಯಕ್ತವಾಗುತ್ತಿವೆ,
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…