ಚಿತ್ರ ಮಂಜರಿ

ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್ : ಹೊಸ ಸಿನಿಮಾ ಘೋಷಣೆ ಮಾಡಿದ ವಿವೇಕ್ ಅಗ್ನಿಹೋತ್ರಿ

ಬಾಲಿವುಡ್‌ನಲ್ಲಿ ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ಅದು ದಿ ಕಾಶ್ಮೀರ್ ಫೈಲ್ಸ್ . 2022ರಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ವಿವೇಕ್ ಅಗ್ನಿಹೋತ್ರಿ ನಿರ್ದೇಶದ ಸಿನಿಮಾ ಸೌಂಡ್ ಮಾಡಿತ್ತು. ಈ ಚಿತ್ರದ ನಿರ್ದೇಶಕ ಫ್ಯಾನ್ಸ್ ಮತ್ತೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಬಾರಿ ಅವರು ಮತ್ತೊಂದು ದಿ ಕಾಶ್ಮೀರ್ ಫೈಲ್ಸ್ ಜೊತೆ ಬರೋದಾಗಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ. ಇನ್ನೂ ಎಲ್ಲೂ ಹೇಳಿರದ ಸಾಕಷ್ಟು ವಿಚಾರಗಳನ್ನ ಒಟಿಟಿ ಮೂಲಕ ತೋರಿಸಲು ನಿರ್ದೇಶಕರು ಮುಂದಾಗಿದ್ದಾರೆ.

2022ರಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅನುಪಮ್ ಖೇರ್ ಅವರು ಪ್ರಮುಖವಾಗಿ ನಟಿಸಿದ್ದರು. ಕಾಶ್ಮೀರ ಪಂಡಿತರನ್ನ ಆಧರಿಸಿ ನೈಜ ಕಥೆಯನ್ನೇ ಈ ಸಿನಿಮಾ ಮೂಲಕ ತೋರಿಸಿಲಾಗಿತ್ತು. ಅನೇಕರು ಈ ಸಿನಿಮಾವನ್ನು ಖಂಡಿಸಿದ್ದರು. ಆದರೆ ಸಾಕಷ್ಟು ಟೀಕೆ, ವಿರೋಧದ ನಡುವೆಯೂ ಸಿನಿಮಾ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು.

ವಿವೇಕ್ ಅಗ್ನಿಹೋತ್ರಿ ಅವರು ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್ ಎಂಬ ಪ್ರಾಜೆಕ್ಟ್ ಈಗ ಘೋಷಣೆ ಮಾಡಿದ್ದಾರೆ. ಇದರ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಅನೇಕ ಕಾಶ್ಮೀರಿ ಹಿಂದೂಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದರ ಜೊತೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ತುಣುಕುಗಳನ್ನ ಸೇರಿಸಲಾಗಿದೆ. ಈ ಬಾರಿ ಒಟಿಟಿ ಮೂಲಕ ಸಿನಿಮಾ ರಿಲೀಸ್ ಆಗಲಿದೆ.

ನರಮೇಧ ನಡೆದಿದೆ ಎಂದು ಒಪ್ಪದವರು, ಭಯೋತ್ಪಾದಕ ಬೆಂಬಲಿಗರು ಮತ್ತು ಭಾರತದ ಶತ್ರುಗಳು ಕಾಶ್ಮೀರ ಫೈಲ್ಸ್ ಪ್ರಶ್ನಿಸಿದರು. ಕಾಶ್ಮೀರ ಹಿಂದೂಗಳ ಹತ್ಯಾಕಾಂಡದ ಭೀಕರ ಸತ್ಯವನ್ನು ಈಗ ನಿಮ್ಮ ಮುಂದಿಡುತ್ತಿದ್ದೇನೆ. ಇದನ್ನು ದೆವ್ವಗಳು ಮಾತ್ರ ಪ್ರಶ್ನಿಸಬಹುದು. ಶೀಘ್ರದಲ್ಲೇ ಬರಲಿದೆ #KashmirUnreported ಎಂದು ವಿವೇಕ್ ಅಗ್ನಿಹೋತ್ರಿ ಬರೆದುಕೊಂಡಿದ್ದಾರೆ. ಕಾಶ್ಮೀರಿ ಪಂಡಿತರ ಇತಿಹಾಸದ ನಿರ್ಲಕ್ಷಿತ ಅಧ್ಯಾಯಗಳ ಮರುಶೋಧ ಎಂದು ಖಾಸಗಿ ಒಟಿಟಿವೊಂದು ಟ್ವೀಟ್ ಮಾಡಿಕೊಂಡಿದೆ.

ದಿ ಕಾಶ್ಮೀರ್ ಫೈಲ್ಸ್ ಅನ್‌ರಿಪೋರ್ಟೆಡ್ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಬಗ್ಗೆ ಸದ್ಯ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ಹೆಚ್ಚಿನ ಅಪ್‌ಡೇಟ್‌ಗೆ ಕಾದುನೋಡಬೇಕಿದೆ. ವಿವೇಕ್ ಅಗ್ನಿಹೋತ್ರಿ ಅವರು ದಿ ವ್ಯಾಕ್ಸಿನ್ ವಾರ್ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಕನ್ನಡದ ನಟಿ ಕಾಂತಾರ ಬೆಡಗಿ ಸಪ್ತಮಿ ಗೌಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈ ವರ್ಷದ ಅಂತ್ಯದಲ್ಲಿ ತೆರೆಗೆ ಬರಲಿದೆ.

lokesh

Recent Posts

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

9 mins ago

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…

28 mins ago

ಗ್ಯಾಸ್‌ ಸಿಲಿಂಡರ್ ಅಭಾವ : ಗ್ರಾಹಕರ ಕಿಸೆಗೆ ಕತ್ತರಿ

ಹಲವು ಹೋಟೆಲ್‌ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್‌ಫುಡ್‌ಗಳ ದರವೂ ಗಗನಮುಖಿ   • ಚಿರಂಜೀವಿ ಸಿ…

39 mins ago

ಶತಮಾನ ಕಳೆದರೂ ಹೊಸತನ ಮೆರೆವ ಶಾಲೆ!

• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…

52 mins ago

ಸಿದ್ದಾಪುರ | ಉಪಟಳ ನೀಡುತ್ತಿದ್ದ ಒಂಟಿ ಸಲಗ ಸೆರೆ

ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…

11 hours ago

ಇರಾನ್‌ ಈವರೆಗೆ 400ಕ್ಕೂ ಹೆಚ್ಚು ಕ್ಷಿಪಣಿ ದಾಳಿ ನಡೆಸಿದೆ ; ಇಸ್ರೇಲ್‌

ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್‌ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…

11 hours ago