ಚಿತ್ರ ಮಂಜರಿ

ಟ್ರಕ್‌ನಲ್ಲಿದ್ದ ಮಾಂಸ ತ್ಯಾಜ್ಯ ಗೋವಿನದ್ದಲ್ಲ: ಐಂದ್ರಿತಾ ರೇ ಆರೋಪಕ್ಕೆ ಡಿಸಿಪಿ ಸ್ಪಷ್ಟನೆ

ಬೆಂಗಳೂರು : ಹಸುವಿನ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್‌ ಚಾಲಕನ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ನಟಿ ಐಂದ್ರಿತಾ ರೇ ಆರೋಪಿಸಿದ್ದರು. ಕನ್ನಡದ ನಟಿಯ ಈ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿದ್ದು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದವರು ಬಿಬಿಎಂಪಿಯಿಂದ ಲೈಸೆನ್ಸ್‌ ಪಡೆದ ವ್ಯಾಪಾರಿ ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ವಾಹನದಲ್ಲಿ ಸಿಕ್ಕಿರುವ ಮೂಳೆಗಳು, ಕೊಂಬುಗಳು, ಚರ್ಮಗಳು ಮತ್ತು ಪ್ರಾಣಿಗಳ ಮಾಂಸ ತ್ಯಾಜ್ಯ ಹಸುಗಳದ್ದಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಅದಲ್ಲದೇ, ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ವ್ಯಾಪಾರಿ ಬಿಬಿಎಂಪಿಯ ಪೂರ್ವ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪಡೆದಿದ್ದು, ಅಧಿಕೃತ ಕಸಾಯಿಖಾನೆಯಿಂದ ಮಾಂಸ ತ್ಯಾಜ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಡಿಸಿಪಿ ತಮ್ಮ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಡಿಸಿಪಿ ಸಿಕೆ ಬಾಬಾ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನಾಗರಿಕರೊಬ್ಬರು ಈ ರೀತಿ ಉಪದ್ರವ ಸೃಷ್ಟಿಸಲು ಪ್ರಯತ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.

ನಟಿ ಐಂದ್ರಿತಾ ರೇ ಏನು ಹೇಳಿದ್ದರು?

ಐಂದ್ರಿತಾ ರೇ ಅವರು ಸೆಪ್ಟೆಂಬರ್‌ 6 ರಂದು ತಮ್ಮ ಎಕ್ಸ್‌ (ಹಿಂದಿನ ಟ್ವಿಟರ್‌) ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಪ್ರಾಣಿಗಳ ಮಾಂಸ ತ್ಯಾಜ್ಯ ತುಂಬಿಕೊಂಡಿರುವ ಟ್ರಕ್‌ ಇತ್ತು. ಶಂಕಿತ ಹಸುವಿನ ಮಾಂಸ ತ್ಯಾಜ್ಯವನ್ನು ಸಾಗಾಟ ಮಾಡಲಾಗುತ್ತಿದೆ. ಸದ್ಯ ಟ್ರಕ್‌ ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿದೆ.

ಆದರೆ, ಪೊಲೀಸರು ಎಫ್‌ಐಆರ್‌ ದಾಖಲಿಸಲು ನಿರಾಕರಿಸುತ್ತಿದ್ದಾರೆ. ಆದ್ದರಿಂದ ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿ ಐಂದ್ರಿತಾ ರೇ ಆಗ್ನೇಯ ವಿಭಾಗದ ಡಿಸಿಪಿ, ಬೆಂಗಳೂರು ನಗರ ಪೊಲೀಸರು ಮತ್ತು ಬೆಂಗಳೂರು ನಗರ ಪೊಲೀಸ್‌ ಆಯುಕ್ತರನ್ನು ಟ್ಯಾಗ್‌ ಮಾಡಿದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ಮುಂದಾಗಿದ್ದ ನಟಿ ಮೋದಿ ಅವರನ್ನು ಕೂಡ ಟ್ಯಾಗ್‌ ಮಾಡಿ ರಾಜ್ಯದಲ್ಲಿ ಗೋಹತ್ಯೆ ಕಾನೂನು ಬಾಹಿರ ಎಂದು ಹೇಳಿದ್ದರು.
andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago