ಬೆಂಗಳೂರು : ಹಸುವಿನ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್ ಚಾಲಕನ ವಿರುದ್ಧ ಬೆಂಗಳೂರು ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ನಟಿ ಐಂದ್ರಿತಾ ರೇ ಆರೋಪಿಸಿದ್ದರು. ಕನ್ನಡದ ನಟಿಯ ಈ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಸತ್ಯಾಸತ್ಯತೆ ಪರಿಶೀಲಿಸಿದ್ದು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದ್ದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅದಲ್ಲದೇ ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಿಸುತ್ತಿದ್ದವರು ಬಿಬಿಎಂಪಿಯಿಂದ ಲೈಸೆನ್ಸ್ ಪಡೆದ ವ್ಯಾಪಾರಿ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿಕೆ ಬಾಬಾ ಅವರು, ಪ್ರಾಣಿಗಳ ಮಾಂಸ ತ್ಯಾಜ್ಯ ಹಸುವಿನದಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು. ವಾಹನದಲ್ಲಿ ಸಿಕ್ಕಿರುವ ಮೂಳೆಗಳು, ಕೊಂಬುಗಳು, ಚರ್ಮಗಳು ಮತ್ತು ಪ್ರಾಣಿಗಳ ಮಾಂಸ ತ್ಯಾಜ್ಯ ಹಸುಗಳದ್ದಲ್ಲ ಎಂಬುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಅದಲ್ಲದೇ, ಪ್ರಾಣಿಗಳ ಮಾಂಸ ತ್ಯಾಜ್ಯ ಸಾಗಾಟ ಮಾಡುತ್ತಿದ್ದ ವ್ಯಾಪಾರಿ ಬಿಬಿಎಂಪಿಯ ಪೂರ್ವ ಪಶು ಸಂಗೋಪನೆ ಇಲಾಖೆಯಿಂದ ಅನುಮತಿ ಪಡೆದಿದ್ದು, ಅಧಿಕೃತ ಕಸಾಯಿಖಾನೆಯಿಂದ ಮಾಂಸ ತ್ಯಾಜ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಡಿಸಿಪಿ ತಮ್ಮ ಟ್ವೀಟ್ನಲ್ಲಿ ಹೇಳಿದ್ದಾರೆ.
ಡಿಸಿಪಿ ಸಿಕೆ ಬಾಬಾ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ನಾಗರಿಕರೊಬ್ಬರು ಈ ರೀತಿ ಉಪದ್ರವ ಸೃಷ್ಟಿಸಲು ಪ್ರಯತ್ನಿಸಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಹೇಳಿದ್ದಾರೆ.
ಐಂದ್ರಿತಾ ರೇ ಅವರು ಸೆಪ್ಟೆಂಬರ್ 6 ರಂದು ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಪ್ರಾಣಿಗಳ ಮಾಂಸ ತ್ಯಾಜ್ಯ ತುಂಬಿಕೊಂಡಿರುವ ಟ್ರಕ್ ಇತ್ತು. ಶಂಕಿತ ಹಸುವಿನ ಮಾಂಸ ತ್ಯಾಜ್ಯವನ್ನು ಸಾಗಾಟ ಮಾಡಲಾಗುತ್ತಿದೆ. ಸದ್ಯ ಟ್ರಕ್ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿದೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…