ಚಿತ್ರ ಮಂಜರಿ

ಇಂದು ಮರು ಬಿಡುಗಡೆಯಾಗಲಿದೆ ʻಓಂʼ ಸಿನಿಮಾ! 28 ವರ್ಷಗಳಲ್ಲಿ 550 ಬಾರಿ ರಿ-ರಿಲೀಸ್‌

SANDALWOOD: 1995ರಲ್ಲಿ ಶಿವರಾಜ್‌ ಕುಮಾರ್ ನಟನೆಯ ಓಂ ಸಿನಿಮಾ ಭರ್ಜರಿ ಹಿಟ್​​ ಆಗಿತ್ತು. ಇದೊಂದು ಎವರ್‌ಗ್ರೀನ್‌ ಮೂವಿ. ಉಪೇಂದ್ರ ಆಕ್ಷನ್‌ ಕಟ್‌ ಹೇಳಿದ್ದ ಈ ಸಿನಿಮಾ ಸಾಕಷ್ಟು ದಿನಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಶಿವಣ್ಣ – ಉಪ್ಪಿ ಕಾಂಬಿನೇಷನ್‌ ಸಿನಿಪ್ರಿಯರ ಮನಗದ್ದಿತ್ತು. ಆಕ್ಷನ್‌ ಸೀಕ್ವೇನ್ಸ್‌ ಜೊತೆ ಭಾವನೆಗಳನ್ನು ಹೊತ್ತು ಸಾಗುವ ಓಂ ಸಿನಿಮಾ ಈಗಲೂ ಬಹುಬೇಡಿಕೆಯ ಚಿತ್ರ. ಈ ಸಿನಿಮಾ ರಿಲೀಸ್‌ ಆದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಹತ್ತು ಹಲವು ದಾಖಲೆಗಳನ್ನು ಸೃಷ್ಟಿ ಮಾಡಿತ್ತು. ಸಾಕಷ್ಟು ದಿನಗಳ ಕಾಲ ಚಿತ್ರಮಂದಿರದಲ್ಲಿ ಸಿನಿಮಾ ಪ್ರದರ್ಶನ ಕಂಡಿತ್ತು.

ಓಂ ಸಿನಿಮಾದಲ್ಲಿ ನಟ ಶಿವರಾಜ್​ ಕುಮಾರ್​ ಅವರ ವಿಭಿನ್ನ ಪಾತ್ರ ಎಲ್ಲೆಲ್ಲೂ ಮೋಡಿ ಮಾಡಿತ್ತು. ಕನ್ನಡದಲ್ಲಿ ಓಂ ಸಿನಿಮಾದ ಮೂಲಕವೇ ಗ್ಯಾಂಗ್​ ಸ್ಟಾರ್​ ಸಿನಿಮಾಗಳ ಎರಾ ಶುರುವಾಗಿದ್ದು ವಿಶೇಷ. 1995 ಮೇ 19 ರಂದು ಭಾರೀ ನಿರೀಕ್ಷೆಗಳೊಂದಿಗೆ ಓಂ ಚಿತ್ರ ರಿಲೀಸ್‌ ಆಗಿತ್ತು. ಇದೀಗ ಓಂ ಸಿನಿಮಾ ಬಿಡುಗಡೆಯಾಗಿ 28 ವರ್ಷಗಳು ಕಳೆದಿವೆ. ಭೂಗತ ಲೋಕದ ಕಥೆ ಇಟ್ಟುಕೊಂಡು ಮಾಡಲಾದ ಓಂ ಸಿನಿಮಾ ಮರು ಬಿಡುಗಡೆಯಲ್ಲಿ ಲಿಮ್ಕಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಸೃಷ್ಟಿಸಿದೆ. 28 ವರ್ಷಗಳಲ್ಲಿ ಕನ್ನಡದ ಈ ಕಲ್ಟ್ ಸಿನಿಮಾ ತನ್ನ ವರ್ಚಸ್ಸನ್ನು ಮಾತ್ರ ಕಳೆದುಕೊಂಡಿಲ್ಲ. ಇದು ವರೆಗೂ ಸುಮಾರು 550 ಬಾರಿ ಮರು ಬಿಡುಗಡೆ ಆಗಿದ್ದು ದಾಖಲೆ.

ಓಂ ಸಿನಿಮಾ ಬೆಂಗಳೂರಿನ ಯಾವುದಾದರೂ ಒಂದು ಥಿಯೇಟರ್‌ನಲ್ಲಿ ರಿ-ರಿಲೀಸ್ ಆಗ್ತಾನೇ ಇರುತ್ತದೆ. ಅದೇ ರೀತಿ ಈ ಚಿತ್ರ ಇದೀಗ ಮತ್ತೊಮ್ಮೆ ಮರು ಬಿಡುಗಡೆಯಾಗಲಿದೆ. ಶಿವರಾಜ್ ಕುಮಾರ್ ಈ ಚಿತ್ರದಲ್ಲಿ ಸತ್ಯ ಹೆಸರಿನ ಪಾತ್ರದಲ್ಲಿ ನಟಿಸಿದ್ದಾರೆ, ನಟಿ ಪ್ರೇಮಾ ಮಧು ಪಾತ್ರದಲ್ಲಿ ಜನರನ್ನು ಸೆಳೆದಿದ್ದಾರೆ. ಈ ಜೋಡಿಗೆ ಅದ್ಭುತ ಹಾಡುಗಳೂ ಸಾಥ್‌ ನೀಡಿವೆ. ಹಂಸಲೇಖ ಸಂಗೀತ ಸಂಯೋಜನೆಯೂ ಈ ಸಿನಿಮಾ ಪ್ಲಸ್‌ ಪಾಯಿಂಟ್‌ ಆಗಿದೆ.

ಸಿನಿ ದುನಿಯಾದಲ್ಲಿ ಹೊಸ ದಾಖಲೆಯನ್ನೇ ಬರೆದ ಓಂ ಸಿನಿಮಾ ಇಂದು ರಿ-ರಿಲೀಸ್ ಆಗುತ್ತಿದೆ. ಬೆಂಗಳೂರಿನ ಕಪಾಲಿ ಥಿಯೇಟರ್‌ ಒಂದರಲ್ಲೇ ಈಗಾಗಲೇ 30 ಬಾರಿ ಓಂ ರಿ-ರಿಲೀಸ್ ಆಗಿದೆ. ಈ ಚಿತ್ರವನ್ನ ಅಂದು ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ 70 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದರು. ರಿಲೀಸ್ ಆದ ಬಳಿಕ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತು. ಈ ಬಾರಿ ಓಂ ಸಿನಿಮಾ ವೀರೇಶ್ ಸಿನಿಮಾಸ್‌ನಲ್ಲಿ ಮರು ಬಿಡುಗಡೆಯಾಗುತ್ತಿದೆ. ಮಾರ್ಚ್‌ 23 ರಂದು ಅಂದರೆ ಇಂದು ಓಂ ಸಿನಿಮಾ ಮೂರು ಶೋ ಪ್ರದರ್ಶನ ಕಾಣಲಿದೆ.

andolanait

Recent Posts

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

42 mins ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

2 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

6 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

7 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

13 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

13 hours ago