ಚಿತ್ರ ಮಂಜರಿ

ನಟ ಸುಶಾಂತ್​ ಸಿಂಗ್​ ಬಗೆಗಿನ ಸಿನಿಮಾಗೆ ತಡೆ ಕೋರಿದ್ದ ಅರ್ಜಿ ವಜಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ. ತನಿಖೆಯ ಪ್ರಗತಿಯ ಬಗ್ಗೆಯೂ ಸಿಬಿಐ ತುಟಿ ಬಿಚ್ಚುತ್ತಿಲ್ಲ. ಆದರೆ ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕುತ್ತಲೇ ಇದೆ. ಈ ಸಾವು ಕೆಲವು ಬಾಲಿವುಡ್ ಸ್ಟಾರ್ಸ್​ಗೆ ಸಂಕಷ್ಟ ತಂದಿತ್ತು ಎನ್ನುವಷ್ಟರಲ್ಲಿ ಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಎಂದು ಆರೋಪಿಸಲಾಗುತ್ತಿದೆ. ನಟನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಸಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಮಧ್ಯೆ, ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನಾಧಾರಿತ ‘ನ್ಯಾಯ್ ದಿ ಜಸ್ಟೀಸ್’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಶಾಂತ್​ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ದೆಹಲಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಚಲನಚಿತ್ರ ನಿರ್ಮಾಪಕರು ವಾಣಿಜ್ಯ ಲಾಭಕ್ಕಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಆದ್ದರಿಂದ ತಮ್ಮ ಮಗನ ಹೆಸರು ಅಥವಾ ಆತನ ಜೀವನದ ಹೋಲಿಕೆಯನ್ನು ಚಲನಚಿತ್ರಗಳಲ್ಲಿ ಬಳಸದಂತೆ ತಡೆಯುವಂತೆ ಅವರು ಕೋರಿದ್ದರು. ಆದರೆ ಹೈಕೋರ್ಟ್​ ನ್ಯಾಯಮೂರ್ತಿ ಸಿ.ಹರಿ ಶಂಕರ್​ ಅವರು ಈ ಅರ್ಜಿಯನ್ನು ವಜಾಗೊಳಿಸಿದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾದ ವಿಚಾರವು ಅವರ ಖಾಸಗಿತನದ ಹಕ್ಕಾಗಿ ಉಳಿದಿಲ್ಲ. ಇವು ಅವರ ಸಾವಿನೊಂದಿಗೆ ಕೊನೆಗೊಂಡಿವೆ ಎಂದು ಕೋರ್ಟ್​ ಹೇಳಿದೆ.

ಈ ಹಿಂದೆ ಕೂಡ ಸುಶಾಂತ್‌ ವೈಯಕ್ತಿಕ ಜೀವನ, ಹೆಸರು, ಚಿತ್ರಗಳು, ವ್ಯಂಗ್ಯ ಭಾವಚಿತ್ರ (ಕ್ಯಾರಿಕೇಚರ್‌), ಜೀವನಶೈಲಿ, ಅಥವಾ ಅವರನ್ನು ಹೋಲುವ ಜೀವನಾಧಾರಿತ ಚಿತ್ರ ಅಥವಾ ಕತೆಯನ್ನು ಹೆಣೆಯಬಾರದು ಎಂದು ಆದೇಶಿಸುವಂತೆ ಕೋರಿ ಸುಶಾಂತ್‌ ತಂದೆ ಕೃಷ್ಣ ಕಿಶೋರ್‌ ಸಿಂಗ್‌ 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೂ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿತ್ತು. ಈ ಸುಶಾಂತ್​ ಅವರ ಜೀವನಾಧಾರಿತ ಚಿತ್ರ ಎನ್ನಲಾದ ‘ನ್ಯಾಯ್ ದಿ ಜಸ್ಟೀಸ್’ ಗೆ ತಡೆ ನೀಡುವಂತೆ ಕೋರಿದ್ದ ಅವರ ಅರ್ಜಿಯನ್ನು ಹೈಕೋರ್ಟ್​ ಪುನಃ ವಜಾಗೊಳಿಸಿದೆ.

lokesh

Recent Posts

ರಾಜ್ಯ ಸರ್ಕಾರ ಪಾಪರ್‌ ಆಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ…

23 mins ago

ಚಾಮರಾಜನಗರ| ಫ್ಲೋರೈಡ್‌ ಮಿಶ್ರಿತ ನೀರು ಸೇವಿಸಿ ಕಿಡ್ನಿ ಕಳೆದುಕೊಂಡ 47 ಜನ

ಚಾಮರಾಜನಗರ: ಫ್ಲೋರೈಡ್‌ ಮಿಶ್ರಿತ ನೀರು ಕುಡಿದು 47 ಮಂದಿ ಕಿಡ್ನಿ ಕಳೆದುಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹನೂರು…

34 mins ago

ಹುಣಸೂರು: ಬಾರ್‌ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಆಗ್ರಹ

ಹುಣಸೂರು: ತಾಲ್ಲೂಕಿನ ಬೋಳನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಬಾರ್‌ ತೆರೆಯಲು ಅನುಮತಿ ನೀಡದಂತೆ ಒತ್ತಾಯಿಸಿ ಗ್ರಾಮಸ್ಥರು ಪಿಡಿಓಗೆ…

1 hour ago

ಪೆನ್ನಾರ್‌ ನದಿ ಜಲವಿವಾದ: ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಕರ್ನಾಟಕ ಹಾಗೂ ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ ಎಂದೇ ಹೆಸರುವಾಸಿಯಾಗಿರುವ ಪೆನ್ನಾರ್‌ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಪತ್ನಿ, ಪುತ್ರನಿಗೆ ಎಸ್‌ಐಟಿ ಬುಲಾವ್‌

ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ತನಿಖೆ ಚುರುಕುಗೊಂಡಿದ್ದು, ವಿಶೇಷ ತನಿಖಾ ತಂಡವು ಪತ್ನಿ ಹಾಗೂ ಮಗನನ್ನು…

3 hours ago

ಬೈಕ್‌ ಟ್ಯಾಕ್ಸಿಗೆ ಒಪ್ಪಿಗೆ: ಸುಪ್ರೀಂಕೋರ್ಟ್‌ ಮೊರೆ ಹೋಗಲಿದೆ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಅಪ್ಲಿಕೇಶನ್‌ ಆಧಾರಿತ ಟ್ಯಾಕ್ಸಿ ನೀಡುವ ಕಂಪನಿಗಳ ನಡುವೆ ಬೈಕ್‌ ಟ್ಯಾಕ್ಸಿ ವಿಚಾರಕ್ಕೆ ಜಟಾಪಟಿ ನಡೆದಿತ್ತು.…

3 hours ago