ಚಿತ್ರ ಮಂಜರಿ

ನಟ ಸುಶಾಂತ್​ ಸಿಂಗ್​ ಬಗೆಗಿನ ಸಿನಿಮಾಗೆ ತಡೆ ಕೋರಿದ್ದ ಅರ್ಜಿ ವಜಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ. ತನಿಖೆಯ ಪ್ರಗತಿಯ ಬಗ್ಗೆಯೂ ಸಿಬಿಐ ತುಟಿ ಬಿಚ್ಚುತ್ತಿಲ್ಲ. ಆದರೆ ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕುತ್ತಲೇ ಇದೆ. ಈ ಸಾವು ಕೆಲವು ಬಾಲಿವುಡ್ ಸ್ಟಾರ್ಸ್​ಗೆ ಸಂಕಷ್ಟ ತಂದಿತ್ತು ಎನ್ನುವಷ್ಟರಲ್ಲಿ ಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಎಂದು ಆರೋಪಿಸಲಾಗುತ್ತಿದೆ. ನಟನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಸಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಮಧ್ಯೆ, ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನಾಧಾರಿತ ‘ನ್ಯಾಯ್ ದಿ ಜಸ್ಟೀಸ್’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಶಾಂತ್​ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ದೆಹಲಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಚಲನಚಿತ್ರ ನಿರ್ಮಾಪಕರು ವಾಣಿಜ್ಯ ಲಾಭಕ್ಕಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಆದ್ದರಿಂದ ತಮ್ಮ ಮಗನ ಹೆಸರು ಅಥವಾ ಆತನ ಜೀವನದ ಹೋಲಿಕೆಯನ್ನು ಚಲನಚಿತ್ರಗಳಲ್ಲಿ ಬಳಸದಂತೆ ತಡೆಯುವಂತೆ ಅವರು ಕೋರಿದ್ದರು. ಆದರೆ ಹೈಕೋರ್ಟ್​ ನ್ಯಾಯಮೂರ್ತಿ ಸಿ.ಹರಿ ಶಂಕರ್​ ಅವರು ಈ ಅರ್ಜಿಯನ್ನು ವಜಾಗೊಳಿಸಿದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾದ ವಿಚಾರವು ಅವರ ಖಾಸಗಿತನದ ಹಕ್ಕಾಗಿ ಉಳಿದಿಲ್ಲ. ಇವು ಅವರ ಸಾವಿನೊಂದಿಗೆ ಕೊನೆಗೊಂಡಿವೆ ಎಂದು ಕೋರ್ಟ್​ ಹೇಳಿದೆ.

ಈ ಹಿಂದೆ ಕೂಡ ಸುಶಾಂತ್‌ ವೈಯಕ್ತಿಕ ಜೀವನ, ಹೆಸರು, ಚಿತ್ರಗಳು, ವ್ಯಂಗ್ಯ ಭಾವಚಿತ್ರ (ಕ್ಯಾರಿಕೇಚರ್‌), ಜೀವನಶೈಲಿ, ಅಥವಾ ಅವರನ್ನು ಹೋಲುವ ಜೀವನಾಧಾರಿತ ಚಿತ್ರ ಅಥವಾ ಕತೆಯನ್ನು ಹೆಣೆಯಬಾರದು ಎಂದು ಆದೇಶಿಸುವಂತೆ ಕೋರಿ ಸುಶಾಂತ್‌ ತಂದೆ ಕೃಷ್ಣ ಕಿಶೋರ್‌ ಸಿಂಗ್‌ 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೂ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿತ್ತು. ಈ ಸುಶಾಂತ್​ ಅವರ ಜೀವನಾಧಾರಿತ ಚಿತ್ರ ಎನ್ನಲಾದ ‘ನ್ಯಾಯ್ ದಿ ಜಸ್ಟೀಸ್’ ಗೆ ತಡೆ ನೀಡುವಂತೆ ಕೋರಿದ್ದ ಅವರ ಅರ್ಜಿಯನ್ನು ಹೈಕೋರ್ಟ್​ ಪುನಃ ವಜಾಗೊಳಿಸಿದೆ.

lokesh

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

9 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

10 hours ago