ಚಿತ್ರ ಮಂಜರಿ

ನಟ ಸುಶಾಂತ್​ ಸಿಂಗ್​ ಬಗೆಗಿನ ಸಿನಿಮಾಗೆ ತಡೆ ಕೋರಿದ್ದ ಅರ್ಜಿ ವಜಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ. ತನಿಖೆಯ ಪ್ರಗತಿಯ ಬಗ್ಗೆಯೂ ಸಿಬಿಐ ತುಟಿ ಬಿಚ್ಚುತ್ತಿಲ್ಲ. ಆದರೆ ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕುತ್ತಲೇ ಇದೆ. ಈ ಸಾವು ಕೆಲವು ಬಾಲಿವುಡ್ ಸ್ಟಾರ್ಸ್​ಗೆ ಸಂಕಷ್ಟ ತಂದಿತ್ತು ಎನ್ನುವಷ್ಟರಲ್ಲಿ ಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಎಂದು ಆರೋಪಿಸಲಾಗುತ್ತಿದೆ. ನಟನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಸಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಮಧ್ಯೆ, ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನಾಧಾರಿತ ‘ನ್ಯಾಯ್ ದಿ ಜಸ್ಟೀಸ್’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಶಾಂತ್​ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ದೆಹಲಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಚಲನಚಿತ್ರ ನಿರ್ಮಾಪಕರು ವಾಣಿಜ್ಯ ಲಾಭಕ್ಕಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಆದ್ದರಿಂದ ತಮ್ಮ ಮಗನ ಹೆಸರು ಅಥವಾ ಆತನ ಜೀವನದ ಹೋಲಿಕೆಯನ್ನು ಚಲನಚಿತ್ರಗಳಲ್ಲಿ ಬಳಸದಂತೆ ತಡೆಯುವಂತೆ ಅವರು ಕೋರಿದ್ದರು. ಆದರೆ ಹೈಕೋರ್ಟ್​ ನ್ಯಾಯಮೂರ್ತಿ ಸಿ.ಹರಿ ಶಂಕರ್​ ಅವರು ಈ ಅರ್ಜಿಯನ್ನು ವಜಾಗೊಳಿಸಿದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾದ ವಿಚಾರವು ಅವರ ಖಾಸಗಿತನದ ಹಕ್ಕಾಗಿ ಉಳಿದಿಲ್ಲ. ಇವು ಅವರ ಸಾವಿನೊಂದಿಗೆ ಕೊನೆಗೊಂಡಿವೆ ಎಂದು ಕೋರ್ಟ್​ ಹೇಳಿದೆ.

ಈ ಹಿಂದೆ ಕೂಡ ಸುಶಾಂತ್‌ ವೈಯಕ್ತಿಕ ಜೀವನ, ಹೆಸರು, ಚಿತ್ರಗಳು, ವ್ಯಂಗ್ಯ ಭಾವಚಿತ್ರ (ಕ್ಯಾರಿಕೇಚರ್‌), ಜೀವನಶೈಲಿ, ಅಥವಾ ಅವರನ್ನು ಹೋಲುವ ಜೀವನಾಧಾರಿತ ಚಿತ್ರ ಅಥವಾ ಕತೆಯನ್ನು ಹೆಣೆಯಬಾರದು ಎಂದು ಆದೇಶಿಸುವಂತೆ ಕೋರಿ ಸುಶಾಂತ್‌ ತಂದೆ ಕೃಷ್ಣ ಕಿಶೋರ್‌ ಸಿಂಗ್‌ 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೂ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿತ್ತು. ಈ ಸುಶಾಂತ್​ ಅವರ ಜೀವನಾಧಾರಿತ ಚಿತ್ರ ಎನ್ನಲಾದ ‘ನ್ಯಾಯ್ ದಿ ಜಸ್ಟೀಸ್’ ಗೆ ತಡೆ ನೀಡುವಂತೆ ಕೋರಿದ್ದ ಅವರ ಅರ್ಜಿಯನ್ನು ಹೈಕೋರ್ಟ್​ ಪುನಃ ವಜಾಗೊಳಿಸಿದೆ.

lokesh

Recent Posts

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

42 seconds ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 mins ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

13 mins ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

24 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

24 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

24 hours ago