ಚಿತ್ರ ಮಂಜರಿ

ನಟ ಸುಶಾಂತ್​ ಸಿಂಗ್​ ಬಗೆಗಿನ ಸಿನಿಮಾಗೆ ತಡೆ ಕೋರಿದ್ದ ಅರ್ಜಿ ವಜಾ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು ನಿಧನರಾದ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣ ಸದ್ಯ ಸಿಬಿಐ ಅಂಗಳದಲ್ಲಿದೆ. ಆದರೆ ಇನ್ನೂ ಕಾರಣ ಬಹಿರಂಗವಾಗಿಲ್ಲ. ತನಿಖೆಯ ಪ್ರಗತಿಯ ಬಗ್ಗೆಯೂ ಸಿಬಿಐ ತುಟಿ ಬಿಚ್ಚುತ್ತಿಲ್ಲ. ಆದರೆ ಸುಶಾಂತ್ ಸಾವು ತೀವ್ರ ಚರ್ಚೆ ಹುಟ್ಟುಹಾಕುತ್ತಲೇ ಇದೆ. ಈ ಸಾವು ಕೆಲವು ಬಾಲಿವುಡ್ ಸ್ಟಾರ್ಸ್​ಗೆ ಸಂಕಷ್ಟ ತಂದಿತ್ತು ಎನ್ನುವಷ್ಟರಲ್ಲಿ ಪ್ರಕರಣ ತನಿಖೆಯ ಪ್ರಗತಿ ನಿಧಾವಾಯಿತು ಎಂದು ಆರೋಪಿಸಲಾಗುತ್ತಿದೆ. ನಟನ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆಯುತ್ತಲೇ ಸಾಗಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂದು ಅವರ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದರು. ಈ ಆಯಾಮದಲ್ಲೂ ಸಹ ಈಗಾಗಲೇ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಮಧ್ಯೆ, ನಟ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನಾಧಾರಿತ ‘ನ್ಯಾಯ್ ದಿ ಜಸ್ಟೀಸ್’ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಸುಶಾಂತ್​ ಅವರ ತಂದೆ ಕೃಷ್ಣ ಕಿಶೋರ್ ಸಿಂಗ್ ಅವರು ದೆಹಲಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಚಲನಚಿತ್ರ ನಿರ್ಮಾಪಕರು ವಾಣಿಜ್ಯ ಲಾಭಕ್ಕಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಇದರಿಂದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಆಗುತ್ತಿದೆ. ಆದ್ದರಿಂದ ತಮ್ಮ ಮಗನ ಹೆಸರು ಅಥವಾ ಆತನ ಜೀವನದ ಹೋಲಿಕೆಯನ್ನು ಚಲನಚಿತ್ರಗಳಲ್ಲಿ ಬಳಸದಂತೆ ತಡೆಯುವಂತೆ ಅವರು ಕೋರಿದ್ದರು. ಆದರೆ ಹೈಕೋರ್ಟ್​ ನ್ಯಾಯಮೂರ್ತಿ ಸಿ.ಹರಿ ಶಂಕರ್​ ಅವರು ಈ ಅರ್ಜಿಯನ್ನು ವಜಾಗೊಳಿಸಿದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾದ ವಿಚಾರವು ಅವರ ಖಾಸಗಿತನದ ಹಕ್ಕಾಗಿ ಉಳಿದಿಲ್ಲ. ಇವು ಅವರ ಸಾವಿನೊಂದಿಗೆ ಕೊನೆಗೊಂಡಿವೆ ಎಂದು ಕೋರ್ಟ್​ ಹೇಳಿದೆ.

ಈ ಹಿಂದೆ ಕೂಡ ಸುಶಾಂತ್‌ ವೈಯಕ್ತಿಕ ಜೀವನ, ಹೆಸರು, ಚಿತ್ರಗಳು, ವ್ಯಂಗ್ಯ ಭಾವಚಿತ್ರ (ಕ್ಯಾರಿಕೇಚರ್‌), ಜೀವನಶೈಲಿ, ಅಥವಾ ಅವರನ್ನು ಹೋಲುವ ಜೀವನಾಧಾರಿತ ಚಿತ್ರ ಅಥವಾ ಕತೆಯನ್ನು ಹೆಣೆಯಬಾರದು ಎಂದು ಆದೇಶಿಸುವಂತೆ ಕೋರಿ ಸುಶಾಂತ್‌ ತಂದೆ ಕೃಷ್ಣ ಕಿಶೋರ್‌ ಸಿಂಗ್‌ 2021ರಲ್ಲಿ ಅರ್ಜಿ ಸಲ್ಲಿಸಿದ್ದರು. ಆಗಲೂ ದೆಹಲಿ ಹೈಕೋರ್ಟ್​ ಅರ್ಜಿಯನ್ನು ವಜಾಗೊಳಿಸಿತ್ತು. ಈ ಸುಶಾಂತ್​ ಅವರ ಜೀವನಾಧಾರಿತ ಚಿತ್ರ ಎನ್ನಲಾದ ‘ನ್ಯಾಯ್ ದಿ ಜಸ್ಟೀಸ್’ ಗೆ ತಡೆ ನೀಡುವಂತೆ ಕೋರಿದ್ದ ಅವರ ಅರ್ಜಿಯನ್ನು ಹೈಕೋರ್ಟ್​ ಪುನಃ ವಜಾಗೊಳಿಸಿದೆ.

lokesh

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

2 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago