ಚಿತ್ರ ಮಂಜರಿ

ಅದ್ದೂರಿಯಾಗಿ ನಡೆದ ರಾಕಿಂಗ್ ಕಪಲ್ ಮಗನ ಹುಟ್ಟುಹಬ್ಬ

ಸ್ಯಾಂಡಲ್ ವುಡ್ ನ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಪುತ್ರ ಯಥರ್ವ್ ನ 4ನೇ ವರ್ಷದ ಹುಟ್ಟುಹಬ್ಬ ಆಚರಣೆಯ ವಿಡಿಯೋವನ್ನು ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಮಗನ ಹುಟ್ಟುಹಬ್ಬವನ್ನು ರಾಕಿಂಗ್ ದಂಪತಿ ಬಹಳ ಅದ್ದೂರಿಯಾಗಿ ಆಚರಿಸಿದ್ದಾರೆ. ಸದ್ಯ ಮಗನ ಹುಟ್ಟುಹಬ್ಬದ ವಿಡಿಯೋವನ್ನು ನಟಿ ರಾಧಿಕಾ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಯಶ್ ದಂಪತಿ ಮಗಳು ಐರಾ ಹಾಗೂ ಮಗ ಯಥರ್ವ್ ಹುಟ್ಟುಹಬ್ಬವನ್ನು ಪ್ರತಿ ವರ್ಷವೂ ಕೂಡ ಬಹಳ ವಿಜೃಂಭಣೆಯಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಗನ ಹುಟ್ಟುಹಬ್ಬವನ್ನು ಖಾಸಗಿ ಹೋಟೆಲ್ ಒಂದರಲ್ಲಿ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದಾರೆ.

ಖಾಸಗಿ ಹೋಟೆಲ್ ನಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಲಾಗಿದ್ದು, ರಾಕಿಂಗ್ ದಂಪತಿ ತಮ್ಮ ಮಕ್ಕಳೊಟ್ಟಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.ಇನ್ನೂ ಯಥರ್ವ್ ಅಕ್ಕ ಐರಾ ಕೂಡ ಖುಷಿಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

ಬಾಲ ಹನುಮಾನ್ ಥೀಮ್ ನಲ್ಲಿ ಯಥರ್ವ್ ಹುಟ್ಟುಹಬ್ಬವನ್ನು ಆಚರಣೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗಿಯಾಗಿದ್ದರು.

ಅಕ್ಟೋಬರ್ 30ರಂದು ರಾಕಿಂಗ್ ದಂಪತಿ ತಮ್ಮ ಪುತ್ರನ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದು, ಅದರ ವಿಡಿಯೋ ತುಣುಕನ್ನು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಯಥರ್ವ್ ಹುಟ್ಟುಹಬ್ಬದ ವಿಡಿಯೋಗೆ ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜೂನಿಯರ್ ಯಶ್ ಗೆ ಶುಭ ಕೋರಿದ್ದಾರೆ.

ಕೆಜಿಎಫ್ ಸರಣಿ ಸಿನಿಮಾಗಳು ತೆರೆಕಂಡು ಒಂದುವರೆ ವರ್ಷ ಕಳೆದರೂ ಯಶ್ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್ ಸಿಕ್ಕಿಲ್ಲ. ಯಶ್ 19 ಬಗ್ಗೆಯೂ ಕೂಡ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಸದ್ಯ ಯಶ್ ಈ ಸಿನಿಮಾ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ ಎನ್ನಲಾಗುತ್ತಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago