ಹನುಮ ಜಯಂತಿಯ ಪ್ರಯುಕ್ತ ‘ಆದಿಪುರುಷ’ ಚಿತ್ರ ತಂಡ ‘ಹನುಮಂತನ‘ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ.
ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್ಲುಕ್ ಪೋಸ್ಟರ್ಅನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್, ‘ರಾಮನ ಭಕ್ತ ಮತ್ತು ರಾಮಾಯಣದ ಪ್ರಾಣ‘ ಎಂದು ಬರೆದುಕೊಂಡಿದ್ದಾರೆ.
ಹನುಮ ಪಾತ್ರಧಾರಿ ದೇವದತ್ತ ನಾಗೆ ಮೊದಲು ಮರಾಠಿ ಕಿರುತರೆಯಲ್ಲಿ ನಟಿಸುತ್ತಿದ್ದರು. ಮರಾಠಿ ಧಾರವಾಹಿ ‘ಜೈ ಮಲ್ಹಾರ್‘ನಲ್ಲಿ ಭಗವಾನ್ ಖಂಡೋಬಾ ಪಾತ್ರದಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. 2013ರಲ್ಲಿ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ಅವರು ಅನೇಕ ಚಿತ್ರಗಳಲ್ಲಿ ನಟಿಸಿ ಭರವಸೆಯ ನಟ ಎನಿಸಿಕೊಂಡಿದ್ದಾರೆ.
ಬ್ಲಾಕ್ಬ್ಲಾಸ್ಟರ್ ‘ತನ್ಹಾಜಿ:ದಿ ಅನ್ಸಂಗ್ ವಾರಿಯರ್‘ ಚಿತ್ರದ ನಿರ್ದೇಶಕ ಓಂ ರಾವುತ್ ಆದಿಪುರುಷ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಕಥೆಯಾಧಾರಿತ ಚಿತ್ರ ಇದಾಗಿದ್ದು, ಬಾಹುಬಲಿ ಖ್ಯಾತಿಯ ಪ್ರಭಾಸ್ ಈ ಚಿತ್ರದಲ್ಲಿ ರಾಘವ ಪಾತ್ರವನ್ನು ನಿರ್ವಹಿಸಲಿದ್ದಾರೆ. ಬಾಲಿವುಡ್ ನಟಿ ಕೃತಿ ಸನೂನ್ ಸೀತೆಯಾಗಿ ಕಾಣಿಸಿಕೊಂಡರೆ, ನಟ ಸನ್ನಿ ಲಕ್ಷಣನಾಗಿ ಕಾಣಿಸಿಕೊಂಡಿದ್ದಾರೆ. ಜೂನ್ 16ರಂದು ಚಿತ್ರ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…