ಚಿತ್ರ ಮಂಜರಿ

ಹನುಮಂತನ ಫಸ್ಟ್‌ಲುಕ್‌ ಬಿಡುಗಡೆ ಮಾಡಿದ ‘ಆದಿಪುರುಷ‘ ಚಿತ್ರತಂಡ

ಹನುಮ ಜಯಂತಿಯ ಪ್ರಯುಕ್ತ ‘ಆದಿಪುರುಷ’ ಚಿತ್ರ ತಂಡ ‘ಹನುಮಂತನ‘ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ.

ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್‌ಲುಕ್‌ ಪೋಸ್ಟರ್‌ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್‌, ‘ರಾಮನ ಭಕ್ತ ಮತ್ತು ರಾಮಾಯಣದ ಪ್ರಾಣ‘ ಎಂದು ಬರೆದುಕೊಂಡಿದ್ದಾರೆ.

ಹನುಮ ಪಾತ್ರಧಾರಿ ದೇವದತ್ತ ನಾಗೆ ಮೊದಲು ಮರಾಠಿ ಕಿರುತರೆಯಲ್ಲಿ ನಟಿಸುತ್ತಿದ್ದರು. ಮರಾಠಿ ಧಾರವಾಹಿ ‘ಜೈ ಮಲ್ಹಾರ್‌‘ನಲ್ಲಿ ಭಗವಾನ್‌ ಖಂಡೋಬಾ ಪಾತ್ರದಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. 2013ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಅವರು ಅನೇಕ ಚಿತ್ರಗಳಲ್ಲಿ ನಟಿಸಿ ಭರವಸೆಯ ನಟ ಎನಿಸಿಕೊಂಡಿದ್ದಾರೆ.

ಬ್ಲಾಕ್‌ಬ್ಲಾಸ್ಟರ್‌ ‘ತನ್ಹಾಜಿ:ದಿ ಅನ್‌ಸಂಗ್ ವಾರಿಯರ್‌‘ ಚಿತ್ರದ ನಿರ್ದೇಶಕ ಓಂ ರಾವುತ್‌ ಆದಿಪುರುಷ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಕಥೆಯಾಧಾರಿತ ಚಿತ್ರ ಇದಾಗಿದ್ದು, ಬಾಹುಬಲಿ ಖ್ಯಾತಿಯ ಪ್ರಭಾಸ್‌ ಈ ಚಿತ್ರದಲ್ಲಿ ರಾಘವ ಪಾತ್ರವನ್ನು ನಿರ್ವಹಿಸಲಿದ್ದಾರೆ. ಬಾಲಿವುಡ್‌ ನಟಿ ಕೃತಿ ಸನೂನ್‌ ಸೀತೆಯಾಗಿ ಕಾಣಿಸಿಕೊಂಡರೆ, ನಟ ಸನ್ನಿ ಲಕ್ಷಣನಾಗಿ ಕಾಣಿಸಿಕೊಂಡಿದ್ದಾರೆ. ಜೂನ್‌ 16ರಂದು ಚಿತ್ರ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.

andolanait

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

59 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago