ಹನುಮ ಜಯಂತಿಯ ಪ್ರಯುಕ್ತ ‘ಆದಿಪುರುಷ’ ಚಿತ್ರ ತಂಡ ‘ಹನುಮಂತನ‘ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ.
ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್ಲುಕ್ ಪೋಸ್ಟರ್ಅನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್, ‘ರಾಮನ ಭಕ್ತ ಮತ್ತು ರಾಮಾಯಣದ ಪ್ರಾಣ‘ ಎಂದು ಬರೆದುಕೊಂಡಿದ್ದಾರೆ.
ಹನುಮ ಪಾತ್ರಧಾರಿ ದೇವದತ್ತ ನಾಗೆ ಮೊದಲು ಮರಾಠಿ ಕಿರುತರೆಯಲ್ಲಿ ನಟಿಸುತ್ತಿದ್ದರು. ಮರಾಠಿ ಧಾರವಾಹಿ ‘ಜೈ ಮಲ್ಹಾರ್‘ನಲ್ಲಿ ಭಗವಾನ್ ಖಂಡೋಬಾ ಪಾತ್ರದಲ್ಲಿ ನಟಿಸಿ ಹೆಸರುವಾಸಿಯಾಗಿದ್ದರು. 2013ರಲ್ಲಿ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ ಅವರು ಅನೇಕ ಚಿತ್ರಗಳಲ್ಲಿ ನಟಿಸಿ ಭರವಸೆಯ ನಟ ಎನಿಸಿಕೊಂಡಿದ್ದಾರೆ.
ಬ್ಲಾಕ್ಬ್ಲಾಸ್ಟರ್ ‘ತನ್ಹಾಜಿ:ದಿ ಅನ್ಸಂಗ್ ವಾರಿಯರ್‘ ಚಿತ್ರದ ನಿರ್ದೇಶಕ ಓಂ ರಾವುತ್ ಆದಿಪುರುಷ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ರಾಮಾಯಣ ಕಥೆಯಾಧಾರಿತ ಚಿತ್ರ ಇದಾಗಿದ್ದು, ಬಾಹುಬಲಿ ಖ್ಯಾತಿಯ ಪ್ರಭಾಸ್ ಈ ಚಿತ್ರದಲ್ಲಿ ರಾಘವ ಪಾತ್ರವನ್ನು ನಿರ್ವಹಿಸಲಿದ್ದಾರೆ. ಬಾಲಿವುಡ್ ನಟಿ ಕೃತಿ ಸನೂನ್ ಸೀತೆಯಾಗಿ ಕಾಣಿಸಿಕೊಂಡರೆ, ನಟ ಸನ್ನಿ ಲಕ್ಷಣನಾಗಿ ಕಾಣಿಸಿಕೊಂಡಿದ್ದಾರೆ. ಜೂನ್ 16ರಂದು ಚಿತ್ರ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿದೆ.
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…
ಬೆಂಗಳೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)…
ಮೈಸೂರು : ಫುಟ್ಪಾತ್ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…