ಚಿತ್ರ ಮಂಜರಿ

ಜೊತೆ ಜೊತೆಯಲಿ ತಂಡದ ರಂಪಾಟ: ಅನಿರುಧ್‌ ಜೊತೆನಿಂತ ಮಹಿಳಾ ಅಭಿಮಾನಿಗಳು

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ ನಡುವೆ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಆರೂರು ಜಗದೀಶ್​ ವಿರುದ್ಧ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ‘ಧಾರಾವಾಹಿ ತಂಡದಲ್ಲಿ ಮನಸ್ತಾಪ ಆದಾಗ ಅದನ್ನು ಅವರೇ ಒಳಗೆ ಬಗೆಹರಿಸಿಕೊಳ್ಳಬೇಕು. ಅದರ ಬದಲು ಸಾರ್ವಜನಿಕವಾಗಿ ಮಾತನಾಡಬಾರದಿತ್ತು’ ಎಂದು ನಟ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘20ನೇ ಸಂಚಿಕೆಯಲ್ಲಿ ಆದ ತೊಂದರೆಗಳನ್ನು 700 ಎಪಿಸೋಡ್​ ನಂತರ ಹೇಳಿದ್ದು ಎಷ್ಟು ಸರಿ? ಅರೂರು ಜಗದೀಶ್​ ಅವರಿಗೆ ಹೊಟ್ಟೆಕಿಚ್ಚು. ನಟರು ಮೊದಲೇ ಸೀನ್​ ಪೇಪರ್​ ಕೊಡಿ ಅಂತ ಕೇಳುವುದೇ ತಪ್ಪಾ? ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಇದು ಬೇರೆ ಎಲ್ಲ ಕಲಾವಿದರಿಗೂ ಒಂದು ವಾರ್ನಿಂಗ್​ ರೀತಿ ಇದೆ. ಯಾವುದೇ ನಟ-ನಟಿಯರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ’ ಎಂದು ಅಭಿಮಾನಿಗಳು ಹೇಳಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ತಂತ್ರಜ್ಞರಿಗೆ ಅನಿರುದ್ಧ್​ ಅವರು ಸರಿಯಾಗಿ ಸಹಕಾರ ನೀಡಿಲ್ಲ ಎಂಬುದು ನಿರ್ಮಾಪಕ ಆರೂರು ಜಗದೀಶ್​ ಅವರ ಆರೋಪ. ಆ ಕಾರಣದಿಂದ ನಿರ್ಮಾಪಕರ ಸಂಘದವರು ಅನಿರುದ್ಧ್​ ಅವರನ್ನು ಎರಡು ವರ್ಷ ಕಿರುತರೆಯಿಂದ ಹೊರಗಿಡುವ ಬಗ್ಗೆ ನಿರ್ಧರಿಸಿರುವ ವಿಚಾರ ತಿಳಿದುಬಂದಿದೆ. ಇದನ್ನು ಅಭಿಮಾನಿಗಳು ವಿರೋಧಿಸಿದ್ದಾರೆ.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು. ಆ ಮೂಲಕ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್​ ಒತ್ತಾಯಿಸಿದ್ದಾರೆ.

andolana

Recent Posts

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

13 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago