ಚಿತ್ರ ಮಂಜರಿ

ಜೊತೆ ಜೊತೆಯಲಿ ತಂಡದ ರಂಪಾಟ: ಅನಿರುಧ್‌ ಜೊತೆನಿಂತ ಮಹಿಳಾ ಅಭಿಮಾನಿಗಳು

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ ನಡುವೆ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಆರೂರು ಜಗದೀಶ್​ ವಿರುದ್ಧ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ‘ಧಾರಾವಾಹಿ ತಂಡದಲ್ಲಿ ಮನಸ್ತಾಪ ಆದಾಗ ಅದನ್ನು ಅವರೇ ಒಳಗೆ ಬಗೆಹರಿಸಿಕೊಳ್ಳಬೇಕು. ಅದರ ಬದಲು ಸಾರ್ವಜನಿಕವಾಗಿ ಮಾತನಾಡಬಾರದಿತ್ತು’ ಎಂದು ನಟ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘20ನೇ ಸಂಚಿಕೆಯಲ್ಲಿ ಆದ ತೊಂದರೆಗಳನ್ನು 700 ಎಪಿಸೋಡ್​ ನಂತರ ಹೇಳಿದ್ದು ಎಷ್ಟು ಸರಿ? ಅರೂರು ಜಗದೀಶ್​ ಅವರಿಗೆ ಹೊಟ್ಟೆಕಿಚ್ಚು. ನಟರು ಮೊದಲೇ ಸೀನ್​ ಪೇಪರ್​ ಕೊಡಿ ಅಂತ ಕೇಳುವುದೇ ತಪ್ಪಾ? ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಇದು ಬೇರೆ ಎಲ್ಲ ಕಲಾವಿದರಿಗೂ ಒಂದು ವಾರ್ನಿಂಗ್​ ರೀತಿ ಇದೆ. ಯಾವುದೇ ನಟ-ನಟಿಯರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ’ ಎಂದು ಅಭಿಮಾನಿಗಳು ಹೇಳಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ತಂತ್ರಜ್ಞರಿಗೆ ಅನಿರುದ್ಧ್​ ಅವರು ಸರಿಯಾಗಿ ಸಹಕಾರ ನೀಡಿಲ್ಲ ಎಂಬುದು ನಿರ್ಮಾಪಕ ಆರೂರು ಜಗದೀಶ್​ ಅವರ ಆರೋಪ. ಆ ಕಾರಣದಿಂದ ನಿರ್ಮಾಪಕರ ಸಂಘದವರು ಅನಿರುದ್ಧ್​ ಅವರನ್ನು ಎರಡು ವರ್ಷ ಕಿರುತರೆಯಿಂದ ಹೊರಗಿಡುವ ಬಗ್ಗೆ ನಿರ್ಧರಿಸಿರುವ ವಿಚಾರ ತಿಳಿದುಬಂದಿದೆ. ಇದನ್ನು ಅಭಿಮಾನಿಗಳು ವಿರೋಧಿಸಿದ್ದಾರೆ.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು. ಆ ಮೂಲಕ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್​ ಒತ್ತಾಯಿಸಿದ್ದಾರೆ.

andolana

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

17 mins ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

27 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

1 hour ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

2 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago