ಚಿತ್ರ ಮಂಜರಿ

ಜೊತೆ ಜೊತೆಯಲಿ ತಂಡದ ರಂಪಾಟ: ಅನಿರುಧ್‌ ಜೊತೆನಿಂತ ಮಹಿಳಾ ಅಭಿಮಾನಿಗಳು

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ ನಡುವೆ ಅನಿರುದ್ಧ್ ಅವರ ಮಹಿಳಾ ಅಭಿಮಾನಿಗಳು ಆರೂರು ಜಗದೀಶ್​ ವಿರುದ್ಧ ಗರಂ ಆಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಧಾರಾವಾಹಿಯಿಂದ ಕೈ ಬಿಟ್ಟಿರುವುದನ್ನು ಪ್ರಶ್ನಿಸಿ ಅಭಿಮಾನಿಗಳು ಧ್ವನಿ ಎತ್ತಿದ್ದಾರೆ. ‘ಧಾರಾವಾಹಿ ತಂಡದಲ್ಲಿ ಮನಸ್ತಾಪ ಆದಾಗ ಅದನ್ನು ಅವರೇ ಒಳಗೆ ಬಗೆಹರಿಸಿಕೊಳ್ಳಬೇಕು. ಅದರ ಬದಲು ಸಾರ್ವಜನಿಕವಾಗಿ ಮಾತನಾಡಬಾರದಿತ್ತು’ ಎಂದು ನಟ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘20ನೇ ಸಂಚಿಕೆಯಲ್ಲಿ ಆದ ತೊಂದರೆಗಳನ್ನು 700 ಎಪಿಸೋಡ್​ ನಂತರ ಹೇಳಿದ್ದು ಎಷ್ಟು ಸರಿ? ಅರೂರು ಜಗದೀಶ್​ ಅವರಿಗೆ ಹೊಟ್ಟೆಕಿಚ್ಚು. ನಟರು ಮೊದಲೇ ಸೀನ್​ ಪೇಪರ್​ ಕೊಡಿ ಅಂತ ಕೇಳುವುದೇ ತಪ್ಪಾ? ಬಹಿಷ್ಕಾರ ಮಾಡಿದ್ದರಲ್ಲಿ ದುರುದ್ದೇಶ ಕಾಣುತ್ತಿದೆ. ಇದು ಬೇರೆ ಎಲ್ಲ ಕಲಾವಿದರಿಗೂ ಒಂದು ವಾರ್ನಿಂಗ್​ ರೀತಿ ಇದೆ. ಯಾವುದೇ ನಟ-ನಟಿಯರು ಧ್ವನಿ ಎತ್ತಿದರೆ ಅವರಿಗೂ ಹೀಗೆಯೇ ಆಗಲಿದೆ ಎಂಬಂತಾಗಿದೆ’ ಎಂದು ಅಭಿಮಾನಿಗಳು ಹೇಳಿದ್ದಾರೆ.

‘ಜೊತೆ ಜೊತೆಯಲಿ’ ಧಾರಾವಾಹಿ ತಂತ್ರಜ್ಞರಿಗೆ ಅನಿರುದ್ಧ್​ ಅವರು ಸರಿಯಾಗಿ ಸಹಕಾರ ನೀಡಿಲ್ಲ ಎಂಬುದು ನಿರ್ಮಾಪಕ ಆರೂರು ಜಗದೀಶ್​ ಅವರ ಆರೋಪ. ಆ ಕಾರಣದಿಂದ ನಿರ್ಮಾಪಕರ ಸಂಘದವರು ಅನಿರುದ್ಧ್​ ಅವರನ್ನು ಎರಡು ವರ್ಷ ಕಿರುತರೆಯಿಂದ ಹೊರಗಿಡುವ ಬಗ್ಗೆ ನಿರ್ಧರಿಸಿರುವ ವಿಚಾರ ತಿಳಿದುಬಂದಿದೆ. ಇದನ್ನು ಅಭಿಮಾನಿಗಳು ವಿರೋಧಿಸಿದ್ದಾರೆ.

ಬೆಂಗಳೂರಿನ ಪ್ರೆಸ್​ ಕ್ಲಬ್​ನಲ್ಲಿ ಅನಿರುದ್ಧ್​ ಅವರ ಮಹಿಳಾ ಅಭಿಮಾನಿಗಳು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಧಾರಾವಾಹಿಗೆ ಅನಿರುದ್ಧ್​ ವಾಪಸ್​ ಬರಬೇಕು. ಆ ಮೂಲಕ ನ್ಯಾಯ ಸಿಗಬೇಕು’ ಎಂದು ಫ್ಯಾನ್ಸ್​ ಒತ್ತಾಯಿಸಿದ್ದಾರೆ.

andolana

Recent Posts

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

10 mins ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

3 hours ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

3 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

3 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

17 hours ago