ಚಿತ್ರ ಮಂಜರಿ

ಡಿಸೆಂಬರ್‌ 8 ಕ್ಕೆ ಅನೌನ್ಸ್‌ ಆಗಲಿದೆ ಯಶ್‌ ಮುಂದಿನ ಚಿತ್ರದ ಟೈಟಲ್‌

ಸ್ಯಾಂಡಲ್ವುಡ್‌ ನ ಸ್ಟಾರ್‌ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಆಗಾಗ ಯಶ್‌ ಮುಂದಿನ ಸಿನಿಮಾ ಬಗೆಗಿನ ಸುದ್ದಿ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ಇದೀಗ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದಾರೆ. ರಾಕಿ ಬಾಯ್‌ ಮುಂದಿನ ಸಿನಿಮಾ ಕೆವಿಎನ್‌ ಪ್ರೊಡಕ್ಷನ್ಸ್‌ ನಲ್ಲಿ ನಿರ್ಮಾಣವಾಗಲಿದೆ.

ಮೊನ್ನೆ ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಕಳೆದ ಕೆಲ ದಿನಗಳ ಹಿಂದೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದರು.ನವೆಂಬರ್‌ 23 ರಂದು ನಡೆದ ಕಾರ್ಯಕ್ರದ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ನಾನೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದರು.

ಇದೀಗ ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ.

lokesh

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

20 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

1 hour ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

4 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

5 hours ago