ಚಿತ್ರ ಮಂಜರಿ

ಡಿಸೆಂಬರ್‌ 8 ಕ್ಕೆ ಅನೌನ್ಸ್‌ ಆಗಲಿದೆ ಯಶ್‌ ಮುಂದಿನ ಚಿತ್ರದ ಟೈಟಲ್‌

ಸ್ಯಾಂಡಲ್ವುಡ್‌ ನ ಸ್ಟಾರ್‌ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಆಗಾಗ ಯಶ್‌ ಮುಂದಿನ ಸಿನಿಮಾ ಬಗೆಗಿನ ಸುದ್ದಿ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ಇದೀಗ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದಾರೆ. ರಾಕಿ ಬಾಯ್‌ ಮುಂದಿನ ಸಿನಿಮಾ ಕೆವಿಎನ್‌ ಪ್ರೊಡಕ್ಷನ್ಸ್‌ ನಲ್ಲಿ ನಿರ್ಮಾಣವಾಗಲಿದೆ.

ಮೊನ್ನೆ ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಕಳೆದ ಕೆಲ ದಿನಗಳ ಹಿಂದೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದರು.ನವೆಂಬರ್‌ 23 ರಂದು ನಡೆದ ಕಾರ್ಯಕ್ರದ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ನಾನೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದರು.

ಇದೀಗ ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ.

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

6 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

6 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

7 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

7 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago