ಚಿತ್ರ ಮಂಜರಿ

ಡಿಸೆಂಬರ್‌ 8 ಕ್ಕೆ ಅನೌನ್ಸ್‌ ಆಗಲಿದೆ ಯಶ್‌ ಮುಂದಿನ ಚಿತ್ರದ ಟೈಟಲ್‌

ಸ್ಯಾಂಡಲ್ವುಡ್‌ ನ ಸ್ಟಾರ್‌ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಆಗಾಗ ಯಶ್‌ ಮುಂದಿನ ಸಿನಿಮಾ ಬಗೆಗಿನ ಸುದ್ದಿ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ಇದೀಗ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದಾರೆ. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದಾರೆ. ರಾಕಿ ಬಾಯ್‌ ಮುಂದಿನ ಸಿನಿಮಾ ಕೆವಿಎನ್‌ ಪ್ರೊಡಕ್ಷನ್ಸ್‌ ನಲ್ಲಿ ನಿರ್ಮಾಣವಾಗಲಿದೆ.

ಮೊನ್ನೆ ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಕಳೆದ ಕೆಲ ದಿನಗಳ ಹಿಂದೆ ಸ್ವತಃ ಯಶ್‌ ಅವರೇ ಬಿಜಿಎಸ್‌ ಉತ್ಸವ ಕಾರ್ಯಕ್ರಮದಲ್ಲಿ ತಮ್ಮ ಮುಂದಿನ ಸಿನಿಮಾ ಬಗ್ಗೆ ಮಾತನಾಡಿದ್ದರು.ನವೆಂಬರ್‌ 23 ರಂದು ನಡೆದ ಕಾರ್ಯಕ್ರದ ವೇದಿಕೆ ಮೇಲೆ ಯಶ್‌ ತಮ್ಮ ಮುಂದಿನ ಚಿತ್ರದ ಅಪ್‌ಡೇಟ್‌ ಅನ್ನು ಸ್ವತಃ ನಾನೇ ನೀಡಲಿದ್ದೇನೆ ಎಂದು ಹೇಳಿಕೊಳ್ಳುವ ಮೂಲಕ ಎಲ್ಲಾ ಊಹಾಪೋಹದ ಸುದ್ದಿಗಳಿಗೂ ತೆರೆ ಎಳೆದಿದ್ದರು.

ಇದೀಗ ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ.

lokesh

Recent Posts

ಓದುಗರ ಪತ್ರ: ನಂಜನಗೂಡು ಕೆ.ಹೆಚ್.ಬಿ. ಕಾಲೋನಿ ರಸ್ತೆ ದುರಸ್ತಿ ಮಾಡಿ

ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…

1 hour ago

ಓದುಗರ ಪತ್ರ: ರಸ್ತೆ ಬದಿಯ ಒಣಗಿದ ಮರಗಳನ್ನು ತೆರವುಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…

1 hour ago

ಓದುಗರ ಪತ್ರ: ಪಾರಂಪರಿಕ ಕಟ್ಟಡಗಳ ಮಾಹಿತಿ ಫಲಕಗಳ ದುಸ್ಥಿತಿ

ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…

1 hour ago

ಕೊಡಗು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದ ರೈತ ಪುತ್ರಿ ನಂದಿತಾ

ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ  ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…

1 hour ago

ಆಸ್ತಿ ವಿವಾದ: ಸೋದರಳಿಯನ ಕೊಲೆಗೆ ಸುಪಾರಿ ಕೊಟ್ಟ ಮಾವ

ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…

2 hours ago