ಚಿತ್ರ ಮಂಜರಿ

ರಾಮಾಯಣಕ್ಕೂ ‘ಆದಿಪುರುಷ್’ ಸಿನಿಮಾಗೂ ಸಂಬಂಧವಿಲ್ಲ : ವರಸೆ ಬದಲಿಸಿದ ಚಿತ್ರತಂಡ

ಬಾಹುಬಲಿ ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ ಜೂನ್ 16ಕ್ಕೆ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ಬಗ್ಗೆ ಬಗೆ ಬಗೆಯ ರೀತಿಯಲ್ಲಿ ಚರ್ಚೆ ನಡೆಯುತ್ತಿದ್ದರೆ, ಚಿತ್ರತಂಡದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಇದೀಗ ಸಿನಿಮಾ ಬಗ್ಗೆ ವರಸೆ ಬದಲಿಸಿದ್ದಾರೆ. ರಾಮಾಯಣಕ್ಕೂ ಆದಿಪುರುಷ್ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಅಂತಾ ಹೇಳಿಕೆ ನೀಡಿದ್ದಾರೆ.

ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ ಕೆಟ್ಟ ವಿಮರ್ಶೆ ವ್ಯಕ್ತವಾಗುತ್ತಿದೆ. ಈ ಸಿನಿಮಾದ ಹಲವು ಅಂಶಗಳನ್ನು ಟೀಕಿಸಲಾಗುತ್ತಿದೆ. ರಾಮಾಯಣವನ್ನು ಆಧರಿಸಿದ ಈ ಚಿತ್ರದಲ್ಲಿ ಪ್ರಭಾಸ್ ಅವರು ರಾಮನ ಪಾತ್ರ ಮಾಡಿದ್ದಾರೆ. ಸೀತೆಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ. ಆಂಜನೇಯನಾಗಿ ದೇವದತ್ತ ನಾಗೆ ಅವರು ಅಭಿನಯಿಸಿದ್ದಾರೆ. ಲಕ್ಷ್ಮಣನ ಪಾತ್ರಕ್ಕೆ ಸನ್ನಿ ಸಿಂಗ್ ಅವರು ಬಣ್ಣ ಹಚ್ಚಿದ್ದಾರೆ. ಸೈಫ್ ಅಲಿ ಖಾನ್ ಅವರು ರಾವಣನಾಗಿ ಅಬ್ಬರಿಸಿದ್ದಾರೆ. ಆದರೆ ರಾಮಾಯಣವನ್ನು ತೋರಿಸಿದ ರೀತಿ ಸರಿಯಾಗಿಲ್ಲ ಎಂದು ಪ್ರೇಕ್ಷಕರು ತಕರಾರು ತೆಗೆದಿದ್ದಾರೆ.

ಸೈಫ್‌ರನ್ನ ಮಾಡ್ರನ್ ರಾವಣನಂತೆ ತೋರಿಸಿರೋದು ಟ್ರೋಲ್ ಆಗುತ್ತಿದೆ. ಸಿನಿಮಾ ನೈಜವಾಗಿ ತೋರಿಸಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿನಿಮಾದ ಸಂಭಾಷಣೆಕಾರ ಮನೋಜ್ ಮುಂತಶೀರ್ ಅವರು ಮಾತು ಬದಲಾಯಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ‘ಆದಿಪುರುಷ್’ ಸಿನಿಮಾವನ್ನು ಟ್ರೋಲ್ ಮಾಡಲಾಗುತ್ತಿದೆ. ಪಾತ್ರಗಳನ್ನು ತೋರಿಸಿದ ರೀತಿ, ಗ್ರಾಫಿಕ್ಸ್ ಗುಣಮಟ್ಟ ಸೇರಿದಂತೆ ಅನೇಕ ವಿಚಾರಗಳನ್ನು ಜನರು ಟೀಕಿಸುತ್ತಿದ್ದಾರೆ. ಈ ನಡುವೆ ಸಂಭಾಷಣಕಾರ ಮನೋಜ್ ಮುಂತಶೀರ್ ಅವರು ನೀಡಿದ ಕೇಳಿಕೆ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಇದನ್ನು ನಾನು ಮೊದಲೇ ಹೇಳಿದ್ದೇ ಮತ್ತು ಈಗಲೂ ಹೇಳುತ್ತೇನೆ. ಈ ಸಿನಿಮಾದ ಹೆಸರು ಆದಿಪುರುಷ್. ನಾವು ರಾಮಾಯಣವನ್ನು ಸಿನಿಮಾ ಮಾಡಿಲ್ಲ. ರಾಮಾಯಾಣಕ್ಕೂ ಆದಿಪುರುಷ್‌ ಸಿನಿಮಾಗೂ ಸಂಬಂಧವಿಲ್ಲ. ಅದರಿಂದ ತುಂಬ ಸ್ಫೂರ್ತಿ ಪಡೆದಿದ್ದೇವೆ. ಡಿಸ್‌ಕ್ಲೈಮರ್‌ನಲ್ಲೂ ನಾವು ಅದನ್ನೇ ಹೇಳಿದ್ದೇವೆ ಎಂದು ಮನೋಜ್ ಮುಂತಶೀರ್ ಹೇಳಿದ್ದಾರೆ.

ಚಿತ್ರತಂಡದ ನಡೆಗೆ ಅಭಿಮಾನಿಗಳಿಂದ ಆಕ್ರೋಶ ವ್ಯಕ್ತವಾಗಿದೆ. ಸಿನಿಮಾ ಕಂಟೆಂಟ್ ವಿಷ್ಯವಾಗಿ ಸುದ್ದಿಯಾಗೋದ್ದಕ್ಕಿಂತ ಟ್ರೋಲ್ ಮಚಾರವಾಗಿಯೇ ಭಾರಿ ಸದ್ದು ಮಾಡುತ್ತಿದೆ.

lokesh

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

1 hour ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

2 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

3 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

4 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

4 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago