ಬೆಂಗಳೂರು : ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಪನೌತಿ ಎಂದು ಕರೆದಿದ್ದರು. ಅದಾದ ನಂತರ ಪನೌತಿ ಬಗ್ಗೆ ಕನ್ನಡದ ನಟ ಕಿಶೋರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪನೌತಿಯಿಂದ ಸೋಲುವುದು ಎಷ್ಟು ಸುಳ್ಳೋ..ಜೈಶ್ರೀರಾಮನಿಂದ ಗೆಲ್ಲುವುದೂ ಅಷ್ಟೇ ಸುಳ್ಳು ಎಂದು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದಿನ ವ್ಯವಸ್ಥೆಯ ವ್ಯಂಗ್ಯವೇನೆಂದರೆ ಸಜ್ಜನರ ಆಟ ಎಂದು ಕರೆಯಲ್ಪಡುವ ಕ್ರಿಕೆಟ್ಟಿನಲ್ಲೂ, ಪ್ರೇಕ್ಷಕರನ್ನು ಜೈ ಶ್ರೀರಾಮ್ ಎಂದು ಧಾರ್ಮಿಕ ಘೋಷಣೆಗಳನ್ನು ಕೂಗುವ ಮಟ್ಟಕ್ಕೆ ತಂದಿಟ್ಟವರು ಪನೌತಿಯ ಪ್ರಭಾವವನ್ನೂ ಹೆಗಲಿಗೇರಿಸಿಕೊಳ್ಳಲೇಬೇಕು ಎಂದು ಕಿಡಿಕಾರಿದ್ದಾರೆ.
ದೇಶವನ್ನು ವಿನಾಶದಂಚಿಗೆ ತಳ್ಳುತ್ತಿರುವ ಧರ್ಮಾಂಧತೆ, ಮೂಢನಂಬಿಕೆ, ಬಡತನ, ಅಸಮಾನತೆ, ನಿರುದ್ಯೊಗ ಮತ್ತು ಭ್ರಷ್ಟಾಚಾರಗಳು ನಿಜವಾದ ಪನೌತಿಯಾಗಿದೆ. “ಹೊಲಸು ಧರ್ಮಾಂಧ ರಾಜಕಾರಣದಿಂದ ಮೂಢನಂಬಿಕೆಯ ಕೂಪದಲ್ಲಿ ತಳ್ಳಲ್ಪಟ್ಟು ಮೂರ್ಖರಾದ ನಾವು ತಿಳಿದುಕೊಳ್ಳಬೇಕಿರುವುದು ಇದನ್ನೇ ಎಂದು ಅವರು ಹೇಳಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…