ಬೆಂಗಳೂರು : ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಪನೌತಿ ಎಂದು ಕರೆದಿದ್ದರು. ಅದಾದ ನಂತರ ಪನೌತಿ ಬಗ್ಗೆ ಕನ್ನಡದ ನಟ ಕಿಶೋರ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಪನೌತಿಯಿಂದ ಸೋಲುವುದು ಎಷ್ಟು ಸುಳ್ಳೋ..ಜೈಶ್ರೀರಾಮನಿಂದ ಗೆಲ್ಲುವುದೂ ಅಷ್ಟೇ ಸುಳ್ಳು ಎಂದು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇಂದಿನ ವ್ಯವಸ್ಥೆಯ ವ್ಯಂಗ್ಯವೇನೆಂದರೆ ಸಜ್ಜನರ ಆಟ ಎಂದು ಕರೆಯಲ್ಪಡುವ ಕ್ರಿಕೆಟ್ಟಿನಲ್ಲೂ, ಪ್ರೇಕ್ಷಕರನ್ನು ಜೈ ಶ್ರೀರಾಮ್ ಎಂದು ಧಾರ್ಮಿಕ ಘೋಷಣೆಗಳನ್ನು ಕೂಗುವ ಮಟ್ಟಕ್ಕೆ ತಂದಿಟ್ಟವರು ಪನೌತಿಯ ಪ್ರಭಾವವನ್ನೂ ಹೆಗಲಿಗೇರಿಸಿಕೊಳ್ಳಲೇಬೇಕು ಎಂದು ಕಿಡಿಕಾರಿದ್ದಾರೆ.
ದೇಶವನ್ನು ವಿನಾಶದಂಚಿಗೆ ತಳ್ಳುತ್ತಿರುವ ಧರ್ಮಾಂಧತೆ, ಮೂಢನಂಬಿಕೆ, ಬಡತನ, ಅಸಮಾನತೆ, ನಿರುದ್ಯೊಗ ಮತ್ತು ಭ್ರಷ್ಟಾಚಾರಗಳು ನಿಜವಾದ ಪನೌತಿಯಾಗಿದೆ. “ಹೊಲಸು ಧರ್ಮಾಂಧ ರಾಜಕಾರಣದಿಂದ ಮೂಢನಂಬಿಕೆಯ ಕೂಪದಲ್ಲಿ ತಳ್ಳಲ್ಪಟ್ಟು ಮೂರ್ಖರಾದ ನಾವು ತಿಳಿದುಕೊಳ್ಳಬೇಕಿರುವುದು ಇದನ್ನೇ ಎಂದು ಅವರು ಹೇಳಿದ್ದಾರೆ.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…