ಭಾರತೀಯ ಚಿತ್ರರಂಗಕ್ಕೆ ಎಐ ಮಾರಕವಾಗಿ ಪರಿಣಮಿಸಿದೆ. ಸೆಲೆಬ್ರಿಟಿಗಳಿಗೆ ಡೀಪ್ಫೇಕ್ ಹೊಸ ಸಮಸ್ಯೆಯಾಗಿದ್ದು, ಅದರಲ್ಲೂ ನಟಿಯರಿಗೆ ಹೆಚ್ಚಿನ ಸಮಸ್ಯೆ ತಂದೊಡ್ಡಿದೆ. ಅವುಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೋ ಭಾರೀ ಕುತೂಹಲವನ್ನೇ ಸೃಷ್ಠಿಸಿತ್ತು. ಒಬ್ಬರ ಬಳಿಕ ಒಬ್ಬರ ಫೇಕ್ ವಿಡಿಯೋಗಳು ವೈರಲ್ ಆಗುತ್ತಿದೆ.
ಈ ಬಗ್ಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಾತನಾಡಿದ್ದು, ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದ್ರೆ ಎಐ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದುಕೊಂಡೆ. ಎಲ್ಲರೂ ಇದರ ವಿರುದ್ಧ ಮಾತನಾಡಿದ್ದು ಧೈರ್ಯ ಕೊಟ್ಟಿದ್ದಾರೆ. ಈ ವಿಷಯಗಳು ಸಾಮಾನ್ಯವಲ್ಲ, ಇದು ನಿಮಗೆ ಎದುರಾದರೆ ಮೌನವಾಗಿರಬೇಡಿ, ಮುಂದೆ ಬಂದು ಪ್ರತಿಕ್ರಿಯಿಸಿ, ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನ ಬೆಂಬಲಿಸುತ್ತಾರೆ ಎಂದು ಎಲ್ಲಾ ಹುಡುಗಿಯರಿಗೆ ರಶ್ಮಿಕಾ ಹೇಳಿದ್ದಾರೆ.
ವೈರಲ್ ಆಗುತ್ತಿರುವ ನನ್ನ ಡೀಪ್ಫೇಕ್ ವೀಡಿಯೊ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೇ, ಈ ರೀತಿ ಏನಾದರೂ ಆಗುವುದು ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ.
ಮಹಿಳೆಯಾಗಿ ಮತ್ತು ನಟಿಯಾಗಿ, ನನ್ನ ರಕ್ಷಣೆಗೆ ಮತ್ತು ಬೆಂಬಲಕ್ಕೆ ಬಂದ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಇಂತಹ ಘಟನೆ ನಡೆದಿದ್ದರೇ, ನಾನು ಅದನ್ನು ಹೇಗೆ ನಿಭಾಯಿಸುತ್ತಿದ್ದೇ ಎಂಬುದು ನಿಜಕ್ಕೂ ನನಗೆ ಗೊತ್ತಿಲ್ಲ. ನಮ್ಮಲ್ಲಿ ಹೆಚ್ಚಿನವರು ಇಂತಹ ಕೆಟ್ಟ ಘಟನೆಗೆ ಸಾಕ್ಷಿಯಾಗುವ ಮೊದಲು ತುರ್ತಾಗಿ ಪರಿಹರಿಸಬೇಕಾಗಿದೆ” ಎಂದು ಮನವಿ ಮಾಡಿದ್ದರು.
ರಣಬೀರ್ ಕಪೂರ್ ಮತ್ತು ರಶ್ಮಿಕಾ ನಟನೆಯ ಬಾಲಿವುಡ್ ಸಿನಿಮಾ ‘ಅನಿಮಲ್’ ಡಿಸೆಂಬರ್ 1 ರಂದು ತೆರೆಗೆ ಬರಲಿದೆ. ಇದರ ಪ್ರಚಾರಕ್ಕಾಗಿ ಅನಿಮಲ್ ತಂಡ ಹೈದರಾಬಾದ್ಗೆ ಹೋಗಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…