ಚಿತ್ರ ಮಂಜರಿ

ಡೀಪ್‌ ಫೇಕ್‌ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದು ಹೀಗೆ

ಭಾರತೀಯ ಚಿತ್ರರಂಗಕ್ಕೆ ಎಐ ಮಾರಕವಾಗಿ ಪರಿಣಮಿಸಿದೆ. ಸೆಲೆಬ್ರಿಟಿಗಳಿಗೆ ಡೀಪ್‌ಫೇಕ್ ಹೊಸ ಸಮಸ್ಯೆಯಾಗಿದ್ದು, ಅದರಲ್ಲೂ ನಟಿಯರಿಗೆ ಹೆಚ್ಚಿನ ಸಮಸ್ಯೆ ತಂದೊಡ್ಡಿದೆ. ಅವುಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವೀಡಿಯೋ ಭಾರೀ ಕುತೂಹಲವನ್ನೇ ಸೃಷ್ಠಿಸಿತ್ತು. ಒಬ್ಬರ ಬಳಿಕ ಒಬ್ಬರ ಫೇಕ್ ವಿಡಿಯೋಗಳು ವೈರಲ್ ಆಗುತ್ತಿದೆ.

ಈ ಬಗ್ಗೆ ಇದೇ ಮೊದಲ ಬಾರಿಗೆ ರಶ್ಮಿಕಾ ಮಾತನಾಡಿದ್ದು, ಈ ವಿಚಾರವನ್ನು ಹಂಚಿಕೊಳ್ಳಲು ನನಗೆ ತುಂಬಾ ನೋವಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದ್ರೆ ಎಐ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದು ಬೇಡ ಎಂದುಕೊಂಡೆ. ಎಲ್ಲರೂ ಇದರ ವಿರುದ್ಧ ಮಾತನಾಡಿದ್ದು ಧೈರ್ಯ ಕೊಟ್ಟಿದ್ದಾರೆ. ಈ ವಿಷಯಗಳು ಸಾಮಾನ್ಯವಲ್ಲ, ಇದು ನಿಮಗೆ ಎದುರಾದರೆ ಮೌನವಾಗಿರಬೇಡಿ, ಮುಂದೆ ಬಂದು ಪ್ರತಿಕ್ರಿಯಿಸಿ, ನಾವು ಒಳ್ಳೆಯ ದೇಶದಲ್ಲಿದ್ದೇವೆ, ಜನ ಬೆಂಬಲಿಸುತ್ತಾರೆ ಎಂದು ಎಲ್ಲಾ ಹುಡುಗಿಯರಿಗೆ ರಶ್ಮಿಕಾ ಹೇಳಿದ್ದಾರೆ.

ವೈರಲ್ ಆಗುತ್ತಿರುವ ನನ್ನ ಡೀಪ್‌ಫೇಕ್ ವೀಡಿಯೊ ಬಗ್ಗೆ ಮಾತನಾಡಬೇಕಾಗಿದೆ. ಪ್ರಾಮಾಣಿಕವಾಗಿ ಹೇಳಬೇಕೆಂದರೇ, ಈ ರೀತಿ ಏನಾದರೂ ಆಗುವುದು ನನಗೆ ಮಾತ್ರವಲ್ಲ, ಪ್ರತಿಯೊಬ್ಬರಿಗೂ ತುಂಬಾ ಭಯಾನಕ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಕಾರಣದಿಂದಾಗಿ ಇಂದು ನಮ್ಮಲ್ಲಿ ಹಲವರು ಇಂತಹ ಘಟನೆಗಳಿಗೆ ಗುರಿಯಾಗುತ್ತಿದ್ದಾರೆ.

ಮಹಿಳೆಯಾಗಿ ಮತ್ತು ನಟಿಯಾಗಿ, ನನ್ನ ರಕ್ಷಣೆಗೆ ಮತ್ತು ಬೆಂಬಲಕ್ಕೆ ಬಂದ ನನ್ನ ಕುಟುಂಬ, ಸ್ನೇಹಿತರು ಮತ್ತು ಹಿತೈಷಿಗಳಿಗೆ ನಾನು ಕೃತಜ್ಞಳಾಗಿದ್ದೇನೆ. ಆದರೆ, ನಾನು ಶಾಲೆ ಅಥವಾ ಕಾಲೇಜಿನಲ್ಲಿದ್ದಾಗ ಇಂತಹ ಘಟನೆ ನಡೆದಿದ್ದರೇ, ನಾನು ಅದನ್ನು ಹೇಗೆ ನಿಭಾಯಿಸುತ್ತಿದ್ದೇ ಎಂಬುದು ನಿಜಕ್ಕೂ ನನಗೆ ಗೊತ್ತಿಲ್ಲ. ನಮ್ಮಲ್ಲಿ ಹೆಚ್ಚಿನವರು ಇಂತಹ ಕೆಟ್ಟ ಘಟನೆಗೆ ಸಾಕ್ಷಿಯಾಗುವ ಮೊದಲು ತುರ್ತಾಗಿ ಪರಿಹರಿಸಬೇಕಾಗಿದೆ” ಎಂದು ಮನವಿ ಮಾಡಿದ್ದರು.

ರಣಬೀರ್‌ ಕಪೂರ್‌ ಮತ್ತು ರಶ್ಮಿಕಾ ನಟನೆಯ ಬಾಲಿವುಡ್ ಸಿನಿಮಾ ‘ಅನಿಮಲ್’ ಡಿಸೆಂಬರ್‌ 1 ರಂದು ತೆರೆಗೆ ಬರಲಿದೆ. ಇದರ ಪ್ರಚಾರಕ್ಕಾಗಿ ಅನಿಮಲ್‌ ತಂಡ ಹೈದರಾಬಾದ್‌ಗೆ ಹೋಗಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗೆ ರಶ್ಮಿಕಾ ಉತ್ತರಿಸಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago