ಚಿತ್ರ ಮಂಜರಿ

ʼದಿ ಕೇರಳ ಸ್ಟೋರಿʼ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ: ದೂರು ದಾಖಲಿಸಿದ ನಿರ್ದೇಶಕ ಸೇನ್‌

ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್‌ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ ಬಂದ ನೆಗೆಟಿವ್‌ ಟಾಕ್ಸ್‌ ಇನ್ನಷ್ಟು ಹೆಚ್ಚಾಗಿದೆ.

ಈ ಎರಡರ ನಡುವೆಯೂ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುವತ್ತ ಮುಂದುವರೆಯುತ್ತಿದೆ. ʼದಿ ಕೇರಳ ಸ್ಟೋರಿʼ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಗೆ ಅಪರಿಚಿತ ನಂಬರ್‌ ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.

“ನೀವು ಒಳ್ಳೆಯದನ್ನು ಮಾಡಲಿಲ್ಲ, ಮನೆಯಿಂದ ಒಂಟಿಯಾಗಿ ಹೊರಬರಬೇಡಿ. ಎಂದು ವ್ಯಕ್ತಿಯೊಬ್ಬ ಅಪರಿಚಿತ ನಂಬರ್‌ ನಿಂದ ತಮ್ಮ ತಂಡದ ಸದಸ್ಯನಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರಿಗೆ ಸುದೀಪ್ತೋ ಸೇನ್ ಹೇಳಿದ್ದಾರೆ.

ಸದ್ಯ ಸಿನಿಮಾ ತಂಡದ ಸದಸ್ಯನಿಗೆ ಪೊಲೀಸರು ಭದ್ರತೆ ನೀಡಿದ್ದು, ಈ ಬಗ್ಗೆ ಯಾವುದೇ  ಎಫ್‌ ಐಆರ್‌ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಕೇರಳದ ಯುವತಿಯೊಬ್ಬಳು ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಂಡ ನಂತರ ಐಸಿಸ್ ಶಿಬಿರಗಳಿಗೆ ಕಳ್ಳಸಾಗಣೆಯಾಗುವ ಕಥೆಯನ್ನು ಚಿತ್ರ ಹೇಳುತ್ತದೆ. ಈ ರೀತಿ 32 ಸಾವಿರ ಹಿಂದೂ ಮಹಿಳೆಯರು ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂದು ಚಿತ್ರ ತಂಡ ತನ್ನ ಟೀಸರ್‌ ನಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಇದು 32 ಸಾವಿರ ಬದಲಿಗೆ 3 ಮಹಿಳೆಯರು ಎಂದು ಚಿತ್ರತಂಡ ಬದಲು ಮಾಡಿತ್ತು.

ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

andolanait

Recent Posts

ಸಕಾಲಕ್ಕೆ ಸಿಗದ ಆಂಬುಲೆನ್ಸ್‌ ; ಡೋಲಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ದ ಗ್ರಾಮಸ್ಥರು

ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…

14 mins ago

ಮಾತು ಕೊಟ್ಟಂತೆ ನಡೆದಿದ್ದೇವೆ : ಸಿಎಂ

2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…

32 mins ago

4 ಕೆ.ಜಿಗೂ ಹೆಚ್ಚು ಹೆರಾಯಿನ್‌ ವಶ : ಪಾಕ್‌ ಕಳ್ಳ ಸಾಗಣಿಕೆ ಪ್ರಯತ್ನ ವಿಫಲ

ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…

41 mins ago

ಮದ್ದೂರು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ : ಸಚಿವ ಚಲುವರಾಯಸ್ವಾಮಿ ಭರವಸೆ

ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ‌.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…

1 hour ago

ಪುಲ್ವಾಮಾ ದಾಳಿ 7 ವರ್ಷ : ಹುತಾತ್ಮರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ನಮನ

ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಸಿಬ್ಬಂದಿಗೆ…

2 hours ago

ಎಮರ್ಜೆನ್ಸಿ ಲ್ಯಾಂಡಿಂಗ್‌ ಉದ್ಘಾಟಿಸಿದ ಪ್ರಧಾನಿ ಮೋದಿ

ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…

2 hours ago