ಚಿತ್ರ ಮಂಜರಿ

ʼದಿ ಕೇರಳ ಸ್ಟೋರಿʼ ತಂಡದ ಸದಸ್ಯನಿಗೆ ಬೆದರಿಕೆ ಸಂದೇಶ: ದೂರು ದಾಖಲಿಸಿದ ನಿರ್ದೇಶಕ ಸೇನ್‌

ಮುಂಬಯಿ: ದಿನಕಳೆದಂತೆ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗೆಗಿನ ಚರ್ಚೆ ಹೆಚ್ಚಾಗುತ್ತಿದೆ. ಒಂದೆಡೆ ಸಿನಿಮಾದ ಬಗ್ಗೆ ಪಾಸಿಟಿವ್‌ ಮಾತುಗಳು ಕೇಳಿ ಬಂದರೆ, ಇನ್ನೊಂದೆಡೆ ಸಿನಿಮಾದ ಬಗ್ಗೆ ಮೊದಲೇ ಕೇಳಿ ಬಂದ ನೆಗೆಟಿವ್‌ ಟಾಕ್ಸ್‌ ಇನ್ನಷ್ಟು ಹೆಚ್ಚಾಗಿದೆ.

ಈ ಎರಡರ ನಡುವೆಯೂ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭರ್ಜರಿ ಗಳಿಕೆ ಕಾಣುವತ್ತ ಮುಂದುವರೆಯುತ್ತಿದೆ. ʼದಿ ಕೇರಳ ಸ್ಟೋರಿʼ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಗೆ ಅಪರಿಚಿತ ನಂಬರ್‌ ನಿಂದ ಬೆದರಿಕೆ ಸಂದೇಶ ಬಂದಿದೆ ಎಂದು ನಿರ್ದೇಶಕ ಸುದೀಪ್ತೋ ಸೇನ್ ಹೇಳಿದ್ದಾರೆ.

“ನೀವು ಒಳ್ಳೆಯದನ್ನು ಮಾಡಲಿಲ್ಲ, ಮನೆಯಿಂದ ಒಂಟಿಯಾಗಿ ಹೊರಬರಬೇಡಿ. ಎಂದು ವ್ಯಕ್ತಿಯೊಬ್ಬ ಅಪರಿಚಿತ ನಂಬರ್‌ ನಿಂದ ತಮ್ಮ ತಂಡದ ಸದಸ್ಯನಿಗೆ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರಿಗೆ ಸುದೀಪ್ತೋ ಸೇನ್ ಹೇಳಿದ್ದಾರೆ.

ಸದ್ಯ ಸಿನಿಮಾ ತಂಡದ ಸದಸ್ಯನಿಗೆ ಪೊಲೀಸರು ಭದ್ರತೆ ನೀಡಿದ್ದು, ಈ ಬಗ್ಗೆ ಯಾವುದೇ  ಎಫ್‌ ಐಆರ್‌ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಕೇರಳದ ಯುವತಿಯೊಬ್ಬಳು ಮದುವೆಯ ನಂತರ ಇಸ್ಲಾಂಗೆ ಮತಾಂತರಗೊಂಡ ನಂತರ ಐಸಿಸ್ ಶಿಬಿರಗಳಿಗೆ ಕಳ್ಳಸಾಗಣೆಯಾಗುವ ಕಥೆಯನ್ನು ಚಿತ್ರ ಹೇಳುತ್ತದೆ. ಈ ರೀತಿ 32 ಸಾವಿರ ಹಿಂದೂ ಮಹಿಳೆಯರು ಮತಾಂತರಗೊಂಡು ಐಸಿಸ್ ಸೇರಿದ್ದಾರೆ ಎಂದು ಚಿತ್ರ ತಂಡ ತನ್ನ ಟೀಸರ್‌ ನಲ್ಲಿ ಹೇಳಿತ್ತು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆ ಬಳಿಕ ಇದು 32 ಸಾವಿರ ಬದಲಿಗೆ 3 ಮಹಿಳೆಯರು ಎಂದು ಚಿತ್ರತಂಡ ಬದಲು ಮಾಡಿತ್ತು.

ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

andolanait

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

6 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

20 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

1 hour ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago