ಚಿತ್ರ ಮಂಜರಿ

ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘RRR’ ಸಿನಿಮಾ

ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’  ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. 

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

 

andolanait

Recent Posts

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

4 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

7 hours ago

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಂಜುಂಡೇಶ್ವರ ಸನ್ನಿಧಿಗೆ ಹರಿದು ಬಂದ ಭಕ್ತಸಾಗರ

ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…

10 hours ago

ಸುಂಟಿಕೊಪ್ಪ: ನೂತನ ಪೊಲೀಸ್‌ ವಸತಿ ಗೃಹ ಉದ್ಘಾಟಿಸಿದ ಸಚಿವ ಪರಮೇಶ್ವರ್‌

ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ…

10 hours ago

ನಂಜುಂಡೇಶ್ವರನ ದೇವಸ್ಥಾನದಲ್ಲಿ ಇನ್ಮುಂದೆ ದಿನ 24 ಗಂಟೆಯೂ ಪ್ರಸಾದ ವಿತರಣೆ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…

10 hours ago

ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತ ದೇಹ ಪತ್ತೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…

10 hours ago