ಚಿತ್ರ ಮಂಜರಿ

ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘RRR’ ಸಿನಿಮಾ

ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’  ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. 

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

 

andolanait

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

3 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

3 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

3 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

4 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

4 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

4 hours ago