ಚಿತ್ರ ಮಂಜರಿ

ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘RRR’ ಸಿನಿಮಾ

ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’  ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. 

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

 

andolanait

Recent Posts

ಕೊಡಗಿನಲ್ಲಿ ಹೆಚ್‌ಪಿವಿ ಲಸಿಕೆ ಪಡೆಯಲು ಹಿಂದೇಟು

ನವೀನ್ ಡಿಸೋಜ ಜಿಲ್ಲೆಯಲ್ಲಿ ಶೇ.೩೦.೮೫ರಷ್ಟು ಮಂದಿಗೆ ಮಾತ್ರ ಲಸಿಕೆ; ಗರ್ಭಕಂಠ ಕ್ಯಾನ್ಸರ್ ತಡೆಯಲು ಲಸಿಕೆ ಕಡ್ಡಾಯ: ಆರೋಗ್ಯ ಇಲಾಖೆ ಮನವಿ…

1 hour ago

ರಾಷ್ಟ್ರೀಯ ಕೆಟಲ್‌ಬಾಲ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆಗಳು

ಹೇಮಂತ್‌ಕುಮಾರ್ ೧೦ ಚಿನ್ನ, ೬ ಬೆಳ್ಳಿ, ೩ ಕಂಚಿನ ಪದಕಗಳನ್ನು ಬಾಚಿದ ಆಕ್ಸ್‌ಫರ್ಡ್ ಅಕಾಡೆಮಿ ಮಂಡ್ಯ: ಪರಿಶ್ರಮವಿದ್ದೆಡೆ ಸಾಧನೆ ಸಾಧ್ಯ ಎಂಬುದಕ್ಕೆ ಶ್ರೀರಂಗಪಟ್ಟಣ…

2 hours ago

ಮುಸುಕಿನ ಜೋಳಕ್ಕೆ ರೋಗ ಬಾಧೆ; ಸಂಕಷ್ಟಕ್ಕೆ ಸಿಲುಕಿದ ರೈತರು

ಮಂಜು ಕೋಟೆ ಕೋಟೆ: ಔಷಧ ಸಿಂಪಡಿಸಿದ ಬಿತ್ತನೆ ಬೀಜ ವಿತರಿಸಿದರೂ ಪ್ರಯೋಜನವಾಗದೆ ಲಕ್ಷಾಂತರ ರೂ. ನಷ್ಟ  ಎಚ್.ಡಿ.ಕೋಟೆ: ಸಾವಿರಾರು ಎಕರೆಯಲ್ಲಿ…

2 hours ago

ಕಾವೇರಿ ನದಿಗಿಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆ

ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…

10 hours ago

ಪಾಕ್‌ನಿಂದ ಆಫ್ಗಾನಿಸ್ತಾನದ ಮೇಲೆ ವಾಯು ದಾಳಿ ; 13 ಮಂದಿ ಸಾವು; 14 ಮಂದಿಗೆ ಗಾಯ

ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…

12 hours ago