ಚಿತ್ರ ಮಂಜರಿ

ಪ್ರತಿಷ್ಠಿತ ಮೂರು ಪ್ರಶಸ್ತಿ ಬಾಚಿಕೊಂಡ ‘RRR’ ಸಿನಿಮಾ

ನವದೆಹಲಿ: ರಾಜ ಮೌಳಿ ನಿರ್ದೇಶನದ, ಈ ವರ್ಷ ತೆರೆಕಂಡು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿರುವ ‘ಆರ್.ಆರ್.ಆರ್’  ಸಿನಿಮಾಗೆ ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್’ನಲ್ಲಿ ಮೂರು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಮೊನ್ನೆಯಷ್ಟೇ ಈ ಸಿನಿಮಾ ನಾಮನಿರ್ದೇಶನಕ್ಕೆ ಆಯ್ಕೆಯಾಗಿದ್ದನ್ನು ಚಿತ್ರತಂಡ ಹಂಚಿಕೊಂಡಿತ್ತು. ಇದೀಗ ಮೂರು ಪ್ರಶಸ್ತಿಗಳನ್ನು ಅದು ಪಡೆದುಕೊಂಡಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡವೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ.

ಫಿಲಡೆಲ್ಫಿಯಾ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಆನ್ಯುವಲ್ ಅವಾರ್ಡ್ ಸಂಸ್ಥೆಯು ಆರ್.ಆರ್.ಆರ್ ಸಿನಿಮಾಗೆ ಅತ್ಯುತ್ತಮ ವಿದೇಶಿ ಸಿನಿಮಾ, ಅತ್ಯುತ್ತಮ ಸಂಗೀತ ಸಂಯೋಜನೆ ಮತ್ತು ಅತ್ಯುತ್ತಮ ಛಾಯಾಗ್ರಹಣ ವಿಭಾಗದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಗಳನ್ನು ನೀಡಿರುವ ಸಂಸ್ಥೆಗೆ ರಾಜಮೌಳಿ ಅಂಡ್ ಟೀಮ್ ಧನ್ಯವಾದಗಳನ್ನು ಅರ್ಪಿಸಿದೆ. 

ಆರ್.ಆರ್.ಆರ್ ಸಿನಿಮಾ ಐದು ವಿಭಾಗಗಳಲ್ಲಿ ನಾಮಿನೇಷನ್ ಪಟ್ಟಿಯಲ್ಲಿತ್ತು. ಅದರಲ್ಲಿ ಮೂರು ಪ್ರಶಸ್ತಿಗಳನ್ನು ಅದು ಬಾಚಿದೆ. ಅಲ್ಲದೇ ಈ ಬಾರಿಯ ಆಸ್ಕರ್ ಪ್ರಶಸ್ತಿಗೂ ಆರ್.ಆರ್.ಆರ್ ಸಿನಿಮಾ ಸ್ಪರ್ಧೆಯಲ್ಲಿದೆ. ಇನ್ನೂ ಅನೇಕ ಪ್ರಶಸ್ತಿಗಳಲ್ಲಿ ಚಿತ್ರ ಸ್ಪರ್ಧೆ ಮಾಡುತ್ತಿದೆ. ಅದರಲ್ಲೂ ಆಸ್ಕರ್ ಮೇಲೆ ಕಣ್ಣಿಟ್ಟು ಚಿತ್ರತಂಡ ಕೂತಿರುವುದರಿಂದ ಆ ಪ್ರಶಸ್ತಿ ಸಿಗುತ್ತಾ ಎನ್ನುವ ಕುತೂಹಲ ಕೂಡ ಮೂಡಿದೆ.

ಆರ್.ಆರ್.ಆರ್ ಸಿನಿಮಾ ಭಾರತೀಯ ಚಿತ್ರರಂಗವನ್ನೇ ಬೆರಗಿನಿಂದ ನೋಡುವಂತೆ ಮಾಡಿತ್ತು. ಸಾವಿರಾರು ಕೋಟಿ ರೂಪಾಯಿಗಳನ್ನು ಬಾಚಿತ್ತು. 2022ರಲ್ಲಿ ತೆರೆಗೆ ಕಂಡ ಸಿನಿಮಾಗಳ ಪೈಕಿ ಬ್ಲಾಕ್ ಬಸ್ಟರ್ ಹಿಟ್ ಚಿತ್ರ ಎಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಈ ಹೊತ್ತಿನಲ್ಲಿ ಪ್ರಶಸ್ತಿಗಳು ಬರುತ್ತಿರುವುದು ಸಹಜವಾಗಿಯೇ ಚಿತ್ರತಂಡಕ್ಕೆ ಮತ್ತು ಅಭಿಮಾನಿಗಳಿಗೆ ಸಂಭ್ರಮ ಹೆಚ್ಚಿಸಿದೆ.

 

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

11 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

11 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

11 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

14 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

14 hours ago