ಚಿತ್ರ ಮಂಜರಿ

ಹುಲಿ ಉಗುರು ಪ್ರಕರಣ: ನಟ ಜಗ್ಗೇಶ್‌ಗೆ ನೀಡಿದ್ದ ನೋಟಿಸ್‌ಗೆ ತಡೆ ನೀಡಿದ ಹೈಕೋರ್ಟ್

ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್‌ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಜಗ್ಗೇಶ್ ಅವರು ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಜಗ್ಗೇಶ್ ಗೆ ನೋಟಿಸ್ ನೀಡಿದ ಕೆಲ ಗಂಟೆಗಳಲ್ಲೇ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿ ಇಲಾಖೆಯ ಕ್ರಮವು ಪ್ರಚಾರದ ಸಾಹಸದಂತೆ ತೋರುತ್ತಿದೆ ಎಂದು ಹೈಕೋರ್ಟ್ ಹೇಳಿದೆ. ಅಕ್ಟೋಬರ್ 25ರಂದು ಸಂಜೆ ಅರಣ್ಯಾಧಿಕಾರಿಗಳು ತಮ್ಮ ಮನೆಗೆ ಭೇಟಿ ನೀಡಿದ ನಂತರ ರಾಜ್ಯಸಭಾ ಸದಸ್ಯರು ನೋಟಿಸ್ ಅನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಅವರ ಅನುಪಸ್ಥಿತಿಯಲ್ಲಿ ಜಗ್ಗೇಶ್ ಪತ್ನಿ ಲಾಕೆಟ್ ಅನ್ನು ನೀಡಿದ್ದರು.

ನೊಟೀಸ್ ಜಾರಿ ಮಾಡಿದ ಕೇವಲ ಒಂದು ಗಂಟೆಯಲ್ಲೇ ಅಧಿಕಾರಿಗಳು ಜಗ್ಗೇಶ್ ಅವರ ನಿವಾಸದ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನೊಟೀಸ್ ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೆ ನೋಟಿಸ್‌ಗೆ ಉತ್ತರಿಸಲು ಜಗ್ಗೇಶ್‌ಗೆ ಸಮಯ ಏಕೆ ನೀಡಲಿಲ್ಲ. ಅವರ ಮನೆಗೆ ಭೇಟಿ ನೀಡಿರುವುದು ಪ್ರಚಾರಕ್ಕಾಗಿಯೇ? ಅರಣ್ಯ ಅಧಿಕಾರಿಗಳು ಜನರ ಮನೆಗಳ ಮೇಲೆ ದಾಳಿ ನಡೆಸುವ ಬದಲು ಪ್ರಚಾರ ಗಿಟ್ಟಿಸಿಕೊಳ್ಳಲು ಬೇರೆ ಮಾರ್ಗಗಳನ್ನು ಹುಡುಕಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಜಗ್ಗೇಶ್ ಪರ ವಾದ ಮಂಡಿಸಿದ ವಕೀಲರು, ಅಕ್ಟೋಬರ್ 25ರಂದು ಅವರಿಗೆ ನೀಡಲಾದ ನೋಟಿಸ್‌ನಲ್ಲಿ ತಮ್ಮ ಬಳಿ ಇರುವ ಹುಲಿ ಉಗುರು ಇದ್ದರೆ ಕೊಡಬೇಕು ಎಂದು ಸೂಚಿಸಿದ್ದರು. ಆದರೆ ಅದಾಗಿ ಒಂದು ಗಂಟೆಯೊಳಗೆ ಅವರ ಮನೆಗೆ ಭೇಟಿ ನೀಡಿ ಶೋಧ ನಡೆಸಿದ್ದರು. 40 ವರ್ಷಗಳಷ್ಟು ಹಳೆಯದಾದ ಹುಲಿ ಉಗುರಿನ ಬಗ್ಗೆ ಹಲವಾರು ವರ್ಷಗಳ ಹಿಂದೆ ನಟ ನೀಡಿದ ಸಂದರ್ಶನವನ್ನು ಆಧರಿಸಿ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಗ್ಗೇಶ್ ವಿರುದ್ಧ ಸಾಕ್ಷಿಯಾಗಿರುವ ಹುಲಿ ಉಗುರನ್ನು ನಾಶಪಡಿಸಲು ಮುಂದಾಗುತ್ತಾರೆ ಎಂಬ ಮಾಹಿತಿ ಮೇರೆಗೆ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದರು ಎಂದು ಸರ್ಕಾರಿ ವಕೀಲರು ವಾದಿಸಿದ್ದರು. ನೋಟಿಸ್ ನೀಡಿದ ಒಂದು ಗಂಟೆಯೊಳಗೆ ಇಲಾಖೆಗೆ ಇಂತಹ ಮಾಹಿತಿ ನೀಡಿದವರು ಯಾರು ಎಂದು ಅಚ್ಚರಿ ವ್ಯಕ್ತಪಡಿಸಿದ ಕೋರ್ಟ್, ಇದು ಪ್ರಚಾರಕ್ಕಾಗಿ ಮಾಡಿದಂತಿದೆ ಎಂದು ಹೇಳಿದೆ. ಯಾವುದೇ ಕಾಡು ಪ್ರಾಣಿಗಳ ಭಾಗಗಳನ್ನು ಹೊಂದಿರುವುದು ಕಾನೂನುಬಾಹಿರವಾಗಿದ್ದರೂ, ಇಲಾಖೆಯ ಕ್ರಮವು ಪ್ರಶ್ನಾರ್ಹವಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ಸಂಸದರು ಸಂಸತ್ ಅಧಿವೇಶನಕ್ಕೆ ಸಿದ್ಧತೆ ನಡೆಸುತ್ತಿದ್ದು, ಅವರ ಅಧಿಕೃತ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವ ರೀತಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಜಗ್ಗೇಶ್ ಪರ ವಕೀಲರು ಹೇಳಿದ್ದಾರೆ. ಇನ್ನು ಶೋಧ ಕಾರ್ಯದ ಹೆಸರಿನಲ್ಲಿ ಇಲಾಖೆಯ 14 ಅಧಿಕಾರಿಗಳು ತಮ್ಮ ಮನೆಗೆ ನುಗ್ಗಿದ್ದಾರೆ ಎಂದು ಜಗ್ಗೇಶ್ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ದೂರಿದ್ದಾರೆ. ಇಲಾಖೆಯ ಕ್ರಮವನ್ನು ಕಾನೂನು ಬಾಹಿರ ಎಂದು ಘೋಷಿಸಿ, ತನಗೆ ನೀಡಿರುವ ನೋಟಿಸ್ ರದ್ದುಗೊಳಿಸುವಂತೆಯೂ ಜಗ್ಗೇಶ್ ನ್ಯಾಯಾಲಯವನ್ನು ಕೋರಿದ್ದಾರೆ.

andolanait

Recent Posts

ಮಂಡ್ಯ ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ.…

15 mins ago

ಶೇ.20ರಷ್ಟಾದರೂ ಕಮರ್ಷಿಯಲ್ ಸಿಲಿಂಡರ್ ಒದಗಿಸಲು ಕ್ರಮವಹಿಸಿ: ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ

ಮೈಸೂರು: ಕೆಲವು ಕಡೆ ಊಟದ ವಿಚಾರಕ್ಕಾಗಿಯೇ ಪ್ರವಾಸಿಗರು ಹೋಟೆಲ್‌ ರೂಂ ಬುಕ್ಕಿಂಗ್‌ ಕ್ಯಾನ್ಸಲ್‌ ಮಾಡಿಕೊಂಡಿದ್ದಾರೆ ಎಂದು ಹೋಟೆಲ್‌ ಮಾಲೀಕರ ಸಂಘದ…

45 mins ago

ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟ ಸೇರಲ್ಲ: ಟಿವಿಕೆ ಸ್ಪಷ್ಟನೆ

ಚೆನ್ನೈ: ಟಿವಿಕೆ ಪಕ್ಷ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಲಿದೆ ಎಂಬ ಸುದ್ದಿಗಳು ಕೇಳಿಬರುತ್ತಿರುವ ಬೆನ್ನಲ್ಲೇ ಟಿವಿಕೆ ಈಗ ಸ್ಪಷ್ಟನೆ…

57 mins ago

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಜೈರಾಜ್‌ ನಿಧನ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಜೈರಾಜ್‌ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಮೂದವರಾಗಿದ್ದ…

1 hour ago

ಜಮೀನುಗಳಲ್ಲಿ ಹುಲಿ ಹಾವಳಿ: ಕೂಲಿ ಕೆಲಸಕ್ಕೆ ಕಾರ್ಮಿಕರ ಹಿಂದೇಟು

ಚಾಮರಾಜನಗರ: ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ನಡುವಿನ ಸಂಘರ್ಷ ತಾರಕಕ್ಕೇರಿದೆ. ಚಿರತೆ ಮತ್ತು ಆನೆಗಳ ದಾಳಿಯ ಬೆನ್ನಲ್ಲೇ, ಈಗ ಹುಲಿರಾಯನ…

2 hours ago

ಚಿರತೆ ದಾಳಿ: ಕೂಲಿ ಕಾರ್ಮಿಕನಿಗೆ ಗಾಯ

ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…

5 hours ago