ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.
ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್ ಆಗ್ರಹಿಸಿದ್ದಾರೆ.
ಬೆಂಗಳೂರು: ಸಚಿವ ಎಚ್.ಕೆ.ಪಾಟೀಲ್ಗೆ ಜೀವ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಫೇಸ್ಬುಕ್ನಲ್ಲಿ ಜೀವ ಬೆದರಿಕೆ…
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…