ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.
ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್ ಆಗ್ರಹಿಸಿದ್ದಾರೆ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…