ಚಿತ್ರ ಮಂಜರಿ

ಕಾವೇರಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ: ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

ಕಾವೇರಿ ಬಿಕ್ಕಟ್ಟಿನ ಸಂಬಂಧ ವಿಡಿಯೊಂದರಲ್ಲಿ ಮಾತನಾಡಿರುವ ಅನಂತ್ ನಾಗ್, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ರಾಜ್ಯದ ಶಾಸಕರು, ಸಂಸದರು ಒಗ್ಗಟ್ಟಾಗಿ ನಿಂತುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಮಳೆ ಕಡಿಮೆ ಇದ್ದ ಸಂದರ್ಭದಲ್ಲಿ ಎಂದಿನಂತೆ ತಮಿಳುನಾಡು ಕಾವೇರಿ ವಿವಾದ ಆರಂಭಿಸಿದೆ. ಇದನ್ನು ಸುಮಾರು 60 ವರ್ಷದಿಂದ ನೋಡಿಕೊಂಡು ಬಂದಿದ್ದೇವೆ. ಅಲ್ಲಿ ಅಧಿಕಾರಕ್ಕೆ ಬರುವುದು ಕೇವಲ ಡಿಎಂಕೆ ಸರ್ಕಾರಗಳೇ. ಕರ್ನಾಟಕ ಸರಿಯಾಗಿ ಕಾವೇರಿ ನೀರು ಬಿಡುತ್ತಿಲ್ಲ ಎನ್ನುವ ಭಾವನೆಯನ್ನು ಅಲ್ಲಿನ ಜನರಿಗೆ ಅವರು ತಂದಿದ್ದಾರೆ ಎಂದು ಹೇಳಿದ್ದಾರೆ.

ಕರ್ನಾಟಕ ಎಂದರೆ ಪಾಕಿಸ್ತಾನ, ಶ್ರೀಲಂಕಾ ಅಂದುಕೊಂಡಿದ್ದಾರೆ. ಯುದ್ಧಕ್ಕೆ ನಿಂತುಕೊಂಡಂತೆ ಅವರ ನಡೆಯಿದೆ. ಮಾತುಕತೆಯಲ್ಲಿ ಬಗೆಹರಿಸಲು ಅವರಿಗೆ ಇಷ್ಟವಿಲ್ಲ. ಅವರೆಲ್ಲರೂ ಒಗ್ಗಟ್ಟಾಗಿ ಕೇಂದ್ರ ಸರ್ಕಾರಕ್ಕೆ ಹೋಗಿ ಕಾವೇರಿ ಸಮಸ್ಯೆಯನ್ನು ಪ್ರತಿನಿಧಿಸುತ್ತಾರೆ. ನಮ್ಮವರು ಅಷ್ಟೇ ಬಲದಿಂದ ಹೋಗಿ ಪ್ರತಿನಿಧಿಸಿದ್ದು ಕೇಳಿಬರುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

ಕಾವೇರಿ ನೀರು ಅವರಿಗೆ ಕುಡಿಯಲು ಅಲ್ಲ ಬದಲಾಗಿ ಕೈಗಾರಿಕೆಗಳಿಗೆ ಹಾಗೂ ಕೃಷಿಗೆ ಬಳಕೆಗೆ, ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ. ನಮ್ಮ ಎಲ್ಲ ಶಾಸಕರು, ಸಂಸದರು ಒಗ್ಗಟ್ಟಿನಿಂದ ನಿಂತುಕೊಂಡು ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು. ಈ ಕುರಿತು ದಿಟ್ಟ ನಿಲುವು ತಾಳಬೇಕು ಎಂದು ಅನಂತನಾಗ್‌ ಆಗ್ರಹಿಸಿದ್ದಾರೆ.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

27 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

3 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

16 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

18 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

18 hours ago