ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ.
ನಟರಾದ ರಾಮ್ ಚರಣ್, ಸಿದ್ಧಾರ್ಥ್, ನಿರ್ಮಾಪಕ ವಂಶಿ, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆ ಫೋಟೋಸ್ ಹೊರಬಿದ್ದಿದ್ದು, ಟಾಲಿವುಡ್ ವಲಯದಲ್ಲಿ ವೈರಲ್ ಆಗಿದೆ.
2023ರ ಜನವರಿ 26 ರಂದು ಟಾಲಿವುಡ್ ನಟ ಶರ್ವಾನಂದ್, ಯುಎಸ್ ನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ರಕ್ಷಿತಾ ರೆಡ್ಡಿ ಅವರೊಂದಿಗೆ ಎಂಗೇಜ್ ಮೆಂಟ್ ಆಗಿರುವ ಫೋಟೋವನ್ನು ಹಂಚಿಕೊಂಡಿದ್ದರು.
ಇತ್ತೀಚೆಗೆ ನಟ ಶರ್ವಾನಂದ್ ಅವರ ಮದುವೆ ರದ್ದಾಗಿದೆ. ಇಬ್ಬರು ಬ್ರೇಕಪ್ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಕೆಲ ದಿನಗಳ ಹಿಂದೆ ಅವರ ಕಾರು ಅಪಘಾತಗೊಂಡಿತ್ತು.
ಸದ್ಯ ಶರ್ವಾನಂದ್ ತಮ್ಮ 35 ನೇ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದನ್ನು ಶ್ರೀರಾಮ್ ಆದಿತ್ಯ ನಿರ್ದೇಶಿಸುತ್ತಿದ್ದಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…