ಚಿತ್ರ ಮಂಜರಿ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ ನಟ ಶರ್ವಾನಂದ್: ಫೋಟೋಸ್‌ ವೈರಲ್

ಹೈದರಾಬಾದ್: ಟಾಲಿವುಡ್‌ ಸ್ಟಾರ್‌ ನಟ ಶರ್ವಾನಂದ್ – ರಕ್ಷಿತಾ ರೆಡ್ಡಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಜೂ.3 ರಂದು ಕುಟುಂಬದವರ ಸಮ್ಮುಖದಲ್ಲಿ ಶರ್ವಾನಂದ್ ವಿವಾಹವಾಗಿದ್ದಾರೆ.

ನಟರಾದ ರಾಮ್ ಚರಣ್, ಸಿದ್ಧಾರ್ಥ್, ನಿರ್ಮಾಪಕ ವಂಶಿ, ರಾಜಕಾರಣಿಗಳು ಸೇರಿದಂತೆ ಅನೇಕ ಗಣ್ಯರು ಮದುವೆಯಲ್ಲಿ ಪಾಲ್ಗೊಂಡು ನವ ಜೋಡಿಗೆ ಶುಭ ಹಾರೈಸಿದ್ದಾರೆ. ಮದುವೆ ಫೋಟೋಸ್‌ ಹೊರಬಿದ್ದಿದ್ದು, ಟಾಲಿವುಡ್‌ ವಲಯದಲ್ಲಿ ವೈರಲ್‌ ಆಗಿದೆ.

2023ರ ಜನವರಿ 26 ರಂದು ಟಾಲಿವುಡ್‌ ನಟ ಶರ್ವಾನಂದ್, ಯುಎಸ್‌ ನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ರಕ್ಷಿತಾ ರೆಡ್ಡಿ ಅವರೊಂದಿಗೆ  ಎಂಗೇಜ್‌ ಮೆಂಟ್‌ ಆಗಿರುವ ಫೋಟೋವನ್ನು  ಹಂಚಿಕೊಂಡಿದ್ದರು.

ಇತ್ತೀಚೆಗೆ ನಟ ಶರ್ವಾನಂದ್ ಅವರ ಮದುವೆ ರದ್ದಾಗಿದೆ. ಇಬ್ಬರು ಬ್ರೇಕಪ್‌ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಕೆಲ ದಿನಗಳ ಹಿಂದೆ ಅವರ ಕಾರು ಅಪಘಾತಗೊಂಡಿತ್ತು.

ಸದ್ಯ ಶರ್ವಾನಂದ್ ತಮ್ಮ 35 ನೇ ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದನ್ನು ಶ್ರೀರಾಮ್ ಆದಿತ್ಯ ನಿರ್ದೇಶಿಸುತ್ತಿದ್ದಾರೆ.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

1 hour ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

14 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

14 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

14 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

15 hours ago