ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 10ನೇ ಘ ಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿ ಗೌರವಿಸಲಾಗಿದೆ. ಈ ಮೂಲಕ ನಟ ರಮೇಶ್ ಅರವಿಂದ್ ಅವರು ಡಾಕ್ಟರ್ ರಮೇಶ್ ಅರವಿಂದ್ ಎನಿಸಿಕೊಳ್ಳಲಿದ್ದಾರೆ.
ವಿಶ್ವವಿದ್ಯಾಲಯದ ಕುಲಪತಿ ರಾಮಚಂದ್ರಗೌಡ ಅವರು ಗೌರವ ಡಾಕ್ಟರೇಟ್ ಅನ್ನು ಪ್ರಧಾನ ಮಾಡಿದ್ದು. ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವಕ ರವಿಚಂದರ್, ದಾಸೋಹ ಅಕ್ಕ ಅನ್ನಪೂರ್ಣ ತಾಯಿ ಇವರುಗಳಿಗೂ ಡಾಕ್ಟರೇಟ್ ಅನ್ನು ಪ್ರಧಾನ ಮಾಡಲಾಗಿದೆ.
ಡಾಕ್ಟರೇಟ್ ಪಡೆದುಕೊಂಡಿರುವ ಬಗ್ಗೆ ನಟ ರಮೇಶ್ ಅರವಿಂದ್ ಅವರು ಟ್ವೀಟ್ ಮಾಡುವ ಮೂಲಕ ಸಿನಿಮ ಕ್ಷೇತ್ರಕ್ಕೆ ನನ್ನ ಕೊಡುಗೆಗಾಗಿ ನಾನು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಿಗೆ ಮತ್ತು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಕೃತಜ್ಞನಾಗಿದ್ದೇನೆ. ಪ್ರತಿಯೊಬ್ಬ ಸಿನಿ ಪ್ರೇಕ್ಷಕರಿಗೆ ಮತ್ತು ಚಿತ್ರರಂಗಕ್ಕೆ ಸಂಬಂಧಿಸಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಧನ್ಯವಾದಗಳು. ಎಂದು ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಕಾರ್ಯಕ್ರಮವು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ 418 ವಿಶ್ವವಿದ್ಯಾಲಯಗಳು ವಿದ್ಯಾಲಯದ ಅಧೀನದಲ್ಲಿ ಸಂಯೋಜನೆಗೊಂಡಿದೆ.
ಘಟಿಕೋತ್ಸವ ಕಾರ್ಯಕ್ರಮದಲ್ಲಿ 43, 607 ವಿದ್ಯಾರ್ಥಿಗಳು ಪದವಿಯನ್ನು ಪಡೆದುಕೊಂಡರು. ಇದರಲ್ಲಿ 11 ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…