ಬೆಂಗಳೂರು : ಕನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ರವಿವಾರ ತಡರಾತ್ರಿ ನಿಧನ ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. ಅಲ್ಲದೇ, ರವಿಕಿರಣ್ ಅವರಿಗೆ ಬೆನ್ನೆಲುಬಾಗಿ ನಿಂತವರು.
ಭಾಸ್ಕರ್ ಕೇವಲ ನಿರ್ಮಾಪಕರು ಮಾತ್ರವಲ್ಲ, ಉದ್ಯಮಿಯೂ ಕೂಡ. ಹಲವಾರು ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ ಕರ್ನಾಟಕ ಟೆಲಿವಿಷನ್ ಕ್ಲಬ್ ನ ನಿರ್ದೇಶಕರಾಗಿಯೂ ಅವರು ಟಿವಿ ಉದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿ ಬಂದ ಬದುಕು ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಪ್ರಸಾರವಾಗಿದೆ. ಸುಕನ್ಯಾ ಕೂಡ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು.
ಭಾಸ್ಕರ್ ಪುತ್ರ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ತೆಲುಗು ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಭಾಸ್ಕರ್ ನಿಧನಕ್ಕೆ ಕಿರುತೆರೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಟೆಲಿವಿಷನ್ ಉದ್ಯಮದ ನಾನಾ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…
ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…