ಚಿತ್ರ ಮಂಜರಿ

ಕಿರುತರೆ ನಟ ನಿರ್ದೇಶಕ ರವಿಕಿರಣ್‌ ಸಹೋದರ ನಿಧನ

ಬೆಂಗಳೂರು : ನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ ಅವರ ಸಹೋದರ ಭಾಸ್ಕರ್ ರವಿವಾರ ತಡರಾತ್ರಿ ನಿಧನ  ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. ಅಲ್ಲದೇ, ರವಿಕಿರಣ್ ಅವರಿಗೆ ಬೆನ್ನೆಲುಬಾಗಿ ನಿಂತವರು.

ಭಾಸ್ಕರ್ ಕೇವಲ ನಿರ್ಮಾಪಕರು ಮಾತ್ರವಲ್ಲ, ಉದ್ಯಮಿಯೂ ಕೂಡ. ಹಲವಾರು ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ ಕರ್ನಾಟಕ ಟೆಲಿವಿಷನ್ ಕ್ಲಬ್ ನ ನಿರ್ದೇಶಕರಾಗಿಯೂ ಅವರು ಟಿವಿ ಉದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿ ಬಂದ ಬದುಕು ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಪ್ರಸಾರವಾಗಿದೆ. ಸುಕನ್ಯಾ ಕೂಡ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು.

ಭಾಸ್ಕರ್ ಪುತ್ರ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ತೆಲುಗು ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಭಾಸ್ಕರ್ ನಿಧನಕ್ಕೆ ಕಿರುತೆರೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಟೆಲಿವಿಷನ್ ಉದ್ಯಮದ ನಾನಾ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.

andolanait

Recent Posts

ಆರು ತಿಂಗಳ ಬಳಿಕ ಕೆಆರ್‌ಎಸ್‌ ಡ್ಯಾಂಗೆ 1000 ಕ್ಯೂಸೆಕ್ಸ್‌ ನೀರು ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ…

1 hour ago

ಓದುಗರ ಪತ್ರ: ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್…

4 hours ago

ಶಂಕರ್ ಎಂಬ ನೆಲದ ಹೂ

ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…

4 hours ago

ಊರೊಳಗೆ ಬೆರೆತು ಜನರ ಬಣ್ಣವೇ ಆದ ಕೆ.ಟಿ.ಶಿವಪ್ರಸಾದ್

ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…

4 hours ago

ಅಮೆರಿಕ ಎಂಬ ಪ್ರಯೋಗಕ್ಕೆ ಇನ್ನೂರೈವತ್ತು ವಸಂತಗಳು

ಶೇಷಾದ್ರಿ ಗಂಜೂರು ಸರಿಯಾಗಿ ಇನ್ನೂರೈವತ್ತು ವರ್ಷಗಳ ಹಿಂದೆ, ೧೭೭೬ರ ಜುಲೈ ೪ರಂದು, ಅಮೆರಿಕದ ಫಿಲಡೆಲ್ಛಿಯಾ ನಗರದಲ್ಲಿ ಒಗ್ಗೂಡಿದ್ದ ೫೬ ಜನ…

4 hours ago

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

8 hours ago