ಚಿತ್ರ ಮಂಜರಿ

ಕಾಟೇರ ಚಿತ್ರ ಮೆಚ್ಚಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ!

ಹುಬ್ಬಳ್ಳಿ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ನಟನೆಯ ಬಹು ನಿರೀಕ್ಷಿತ ಕಾಟೇರ ಚಿತ್ರ ಇದೇ ಡಿಸೆಂಬರ್‌ ೨೯ ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರ ಮೆಚ್ಚಿರುವ ಅಭಿಮಾನಿಗಳು ಬಹುಪರಾಕ್‌ ಎಂದಿದ್ದಾರೆ. ಈ ಬೆನ್ನಲ್ಲೆ ಇಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಹುಬ್ಬಳ್ಳಿಯಲ್ಲಿ ಕಾಟೇರ ಸಿನಿಮಾ ವೀಕ್ಷಿಸಿದ್ದು, ಚಿತ್ರದ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದರ್ಶನ ನಟನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಹುಬ್ಬಳ್ಳಿಯಲ್ಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ. ಇವರಿಗೆ ಶಾಸಕ ಮಹೇಶ್ ಟೆಂಗಿನಕಾ‌ಯಿ ಸಾಥ್‌ ನೀಡಿದ್ದಾರೆ. ಸಾಮಾಜಿಕ ಬದ್ಧತೆ, ನಟನೆ ಎಲ್ಲದರ ಬಗ್ಗೆಯೂ ಸಚಿವರು ಮೆಚ್ಚುಗೆಯ ಮಾತುಗಳನ್ನಾಡಿದ್ದು, ದರ್ಶನ್‌ ಅಭಿಮಾನಿಗಳಿಗೆ ಸಂತಸ ತಂದಿದೆ.

ನಟ ದರ್ಶನ್‌ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಕಾಟೇರ ಚಿತ್ರಕ್ಕೆ ತರುಣ್‌ ಸುಧೀರ್‌ ನಿರ್ದೇಶನ ಮಾಡಿದ್ದಾರೆ. ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾ ಸಮಾಜಿಕ ಕಳಕಳಿಯಿರುವ ಸಿನಿಮವಾಗಿದ್ದು, ಚಿತ್ರ ರಸಿಕರು, ರಾಜಕಾರಣಿಗಳು ಎಲ್ಲರೂ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಪ್ರಲ್ಹಾದ್‌ ಜೋಶಿ ಟ್ವೀಟ್‌ ನಲ್ಲೇನಿದೆ?

ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಕ್‌ಲೈನ್ ವೆಂಕಟೇಶ ಅವರ ನಿರ್ಮಾಣದಲ್ಲಿ ತರುಣ್ ಸುಧೀರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಕಾಟೇರ ಚಲನಚಿತ್ರವನ್ನು ಹುಬ್ಬಳ್ಳಿಯಲ್ಲಿ ವೀಕ್ಷಿಸಿದೆನು.

ರೈತರಿಗೆ ಪ್ರತಿಯೊಬ್ಬರೂ ನೀಡಬೇಕಾದ ಪ್ರಾಮುಖ್ಯತೆ, ಸಮಾಜದಲ್ಲಿ ಸರ್ವರನ್ನೂ ಸಮಾನವಾಗಿ ಕಾಣಬೇಕೆನ್ನುವ ಸಂದೇಶವನ್ನು ಚಲನಚಿತ್ರದ ಮೂಲಕ ಅಚ್ಚುಕಟ್ಟಾಗಿ ಅದ್ಭುತವಾಗಿ ತೋರಿಸಲಾಗಿದೆ.
ದರ್ಶನ್ ಅವರ ಅದ್ಭುತ ನಟನೆ ಅಭಿಮಾನಿಗಳನ್ನು ಚಲನಚಿತ್ರ ಪ್ರಿಯರನ್ನು ಮತ್ತೊಮ್ಮೆ ರಂಜಿಸುವುದರ ಜೊತೆಗೆ ಹೊಸ ಸಂದೇಶವನ್ನು ಸಾರಿದ್ದಾರೆ. ಚಲನಚಿತ್ರ ಯಶಸ್ಸು ಕಾಣಲಿ ಎಂದು ಕಾಟೇರ ಚಲನಚಿತ್ರ ತಂಡಕ್ಕೆ ಶುಭ ಹಾರೈಸುತ್ತೇನೆ ಎಂದು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾಟೇರ ಚಿತ್ರವನ್ನು ಹಾರೈಸಿರುವ ಬಗ್ಗೆ ಬರೆದುಕೊಂಡಿದ್ದಾರೆ.

https://x.com/JoshiPralhad/status/1741350641728168256?s=20

andolanait

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

6 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

8 hours ago