ಚಿತ್ರ ಮಂಜರಿ

17 ವರ್ಷಗಳ ಹಿಂದೆ ಚಿತ್ರಿತವಾದ ಉಪೇಂದ್ರ-ರಮ್ಯ ಜೋಡಿಯ ಚಿತ್ರ

ಉಪೇಂದ್ರ ಅಭಿನಯದ ‘ಯುಐ’ ಚಿತ್ರವು ಡಿಸೆಂಬರ್.೨೦ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಉಪೇಂದ್ರ ಅಭಿನಯದ ಹಳೆಯ ಚಿತ್ರವೊಂದು, ಜನವರಿಯಲ್ಲಿ ಬಿಡುಗಡೆ ಆಗುತ್ತಿರುವ ಸುದ್ದಿಯೊಂದು ಕೇಳಿಬಂದಿದೆ.

೨೦೦೭ರಲ್ಲಿ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಉಪೇಂದ್ರ ಮತ್ತು ರಮ್ಯಾ ಅಭಿನಯದಲ್ಲಿ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಎಂಬ ಚಿತ್ರ ಪ್ರಾರಂಭವಾಗಿತ್ತು. ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರ ಸಮ್ಮುಖದಲ್ಲಿ ಈ ಚಿತ್ರವು ಅಶೋಕ ಹೋಟೆಲ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಸೆಟ್ಟೇರಿತ್ತು. ಈ ಚಿತ್ರದ ಚಿತ್ರೀಕರಣ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದರೂ, ಕಾರಣಾಂತರಗಳಿಂದ ಬಿಡುಗಡೆಯಾಗಿರಲಿಲ್ಲ.

ಆ ಕಾಲಕ್ಕೆ ಅತ್ಯಂತ ದುಬಾರಿ ಬಜೆಟ್‌ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’, ೧೭ ವರ್ಷಗಳನಂತರ ‘ರಕ್ತ ಕಾಶ್ಮೀರ’ ಎಂಬ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ.

ಆಗ ಅದನ್ನು ಮಕ್ಕಳ ಚಿತ್ರ ಎಂದು ಹೇಳಲಾಗಿತ್ತು. ಈಗ ಅದಕ್ಕೆ ಬೇರೆಯೇ ರೀತಿಯ ಪ್ರಚಾರ ನಡೆದಿದೆ. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ಇದೇ ಚಿತ್ರದ ಪ್ರಮುಖ ಕಥಾ ಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ.

ಅದರ ನಿರ್ಮೂಲನೆಗೆ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ. ಭಯೋತ್ಪಾದನೆ ವಿರುದ್ಧ ಮಕ್ಕಳು ಹೇಗೆ ಹೋರಾಡುತ್ತಾರೆ ಎಂಬ ಕಥೆ ಈ ಚಿತ್ರದಲ್ಲಿದೆ.

ಎಸ್.ವಿ.ರಾಜೇಂದ್ರಸಿಂಗ್ ಬಾಬು ಅವರೆ ‘ರಕ್ತ ಕಾಶ್ಮೀರ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದರೆ, ಗುರುಕಿರಣ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಚಿತ್ರದಲ್ಲಿ ಉಪೇಂದ್ರ, ರಮ್ಯ, ಪಾರ್ವತಿ ಮಿಲ್ಟನ್, ದೊಡ್ಡಣ್ಣ, ಓಂಪ್ರಕಾಶ್ ರಾವ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

41 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago