ಚಿತ್ರ ಮಂಜರಿ

ಉತ್ತರಕಾಂಡದಲ್ಲಿ ಡಾಲಿ ರಮ್ಯಾ ಜೋಡಿ, ಇಂದು ನೆರವೇರಿದ ಮುಹೂರ್ತ

ರತ್ನನ್ ಪ್ರಪಂಚ’ದ ನಿರ್ದೇಶಕ ರೋಹಿತ್ ಪದಕಿ ಚಿತ್ರವಿದು. ವಿಜಯ್ ಕಿರಗಂದೂರು ಹೊಂಬಾಳೆಯ ಅಂಗಸಂಸ್ಥೆ ಕೆ.ಆರ್.ಜಿ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದ್ದು, ಮುಹೂರ್ತ ಭಾನುವಾರ ನೆರವೇರಿತು.

ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ನಡೆಸಿದ್ದಾರೆ ರಮ್ಯಾ. ‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನಿಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಲು ಖುಷಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಒಳ್ಳೆಯ ಜಾಗದಲ್ಲಿರುವೆ ಎಂಬ ಭಾವನೆ ನೀಡುತ್ತಿದೆ ಎಂದು ರಮ್ಯಾ ಹೇಳಿದ್ದಾರೆ.

‘ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಉತ್ತರಕರ್ನಾಟಕದ ಅದ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’ ಎಂದು ನಿರ್ದೇಶಕ ರೋಹಿತ್ ಪದಕಿ ಹೇಳಿದ್ದಾರೆ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ.

ಅರವಿಂದ ಕಶ್ಯಪ್ ಕ್ಯಾಮೆರಾ, ಚರಣ್ ರಾಜ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago