ಚಿತ್ರ ಮಂಜರಿ

ಉತ್ತರಕಾಂಡದಲ್ಲಿ ಡಾಲಿ ರಮ್ಯಾ ಜೋಡಿ, ಇಂದು ನೆರವೇರಿದ ಮುಹೂರ್ತ

ರತ್ನನ್ ಪ್ರಪಂಚ’ದ ನಿರ್ದೇಶಕ ರೋಹಿತ್ ಪದಕಿ ಚಿತ್ರವಿದು. ವಿಜಯ್ ಕಿರಗಂದೂರು ಹೊಂಬಾಳೆಯ ಅಂಗಸಂಸ್ಥೆ ಕೆ.ಆರ್.ಜಿ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದ್ದು, ಮುಹೂರ್ತ ಭಾನುವಾರ ನೆರವೇರಿತು.

ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ನಡೆಸಿದ್ದಾರೆ ರಮ್ಯಾ. ‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನಿಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಲು ಖುಷಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಒಳ್ಳೆಯ ಜಾಗದಲ್ಲಿರುವೆ ಎಂಬ ಭಾವನೆ ನೀಡುತ್ತಿದೆ ಎಂದು ರಮ್ಯಾ ಹೇಳಿದ್ದಾರೆ.

‘ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಉತ್ತರಕರ್ನಾಟಕದ ಅದ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’ ಎಂದು ನಿರ್ದೇಶಕ ರೋಹಿತ್ ಪದಕಿ ಹೇಳಿದ್ದಾರೆ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ.

ಅರವಿಂದ ಕಶ್ಯಪ್ ಕ್ಯಾಮೆರಾ, ಚರಣ್ ರಾಜ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago