ಚಿತ್ರ ಮಂಜರಿ

ಉತ್ತರಕಾಂಡದಲ್ಲಿ ಡಾಲಿ ರಮ್ಯಾ ಜೋಡಿ, ಇಂದು ನೆರವೇರಿದ ಮುಹೂರ್ತ

ರತ್ನನ್ ಪ್ರಪಂಚ’ದ ನಿರ್ದೇಶಕ ರೋಹಿತ್ ಪದಕಿ ಚಿತ್ರವಿದು. ವಿಜಯ್ ಕಿರಗಂದೂರು ಹೊಂಬಾಳೆಯ ಅಂಗಸಂಸ್ಥೆ ಕೆ.ಆರ್.ಜಿ ಸಂಸ್ಥೆ ಚಿತ್ರವನ್ನು ನಿರ್ಮಿಸುತ್ತಿದ್ದು, ಮುಹೂರ್ತ ಭಾನುವಾರ ನೆರವೇರಿತು.

ಎಂಟು ವರ್ಷಗಳ ಬಳಿಕ ತಮಗೆ ಅತ್ಯಂತ ಆಪ್ತವಾದ ಕಥೆ ಹಾಗು ಪಾತ್ರ ‘ಉತ್ತರಕಾಂಡ’ ಕೊಟ್ಟಿರುವ ಕಾರಣ ಅದಕ್ಕೆ ಬೇಕಾದ ತಯಾರಿ ನಡೆಸಿದ್ದಾರೆ ರಮ್ಯಾ. ‘ರತ್ನನ್ ಪ್ರಪಂಚ’ ಚಿತ್ರಕ್ಕೆ ನಾಯಕಿಯ ಪಾತ್ರವನ್ನು ನನಗೆ ಕೇಳಿದಾಗ ಕಾರಣಾಂತರಗಳಿಂದ ಅದನ್ನು ಒಪ್ಪಿಕೊಳ್ಳಲಾಗಿರಲಿಲ್ಲ. ನನಗೆ ಅತ್ಯಂತ ಆಪ್ತವಾದ ಸಿನಿಮಾ ರತ್ನನ್ ಪ್ರಪಂಚ. ಅಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಲು ಖುಷಿಯಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಮತ್ತು ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಒಳ್ಳೆಯ ಜಾಗದಲ್ಲಿರುವೆ ಎಂಬ ಭಾವನೆ ನೀಡುತ್ತಿದೆ ಎಂದು ರಮ್ಯಾ ಹೇಳಿದ್ದಾರೆ.

‘ಈ ಚಿತ್ರ ಮನುಷ್ಯನ ವಿಲಕ್ಷಣ ಮನಸ್ಸಿನ ಹೋರಾಟವನ್ನ ಬಿಂಬಿಸುತ್ತದೆ. ಸರಿ ತಪ್ಪುಗಳ ಸಿದ್ದಾಂತ, ಅಹಂಕಾರಗಳ ಗುದ್ದಾಟ. ಉತ್ತರಕರ್ನಾಟಕದ ಅದ್ಬುತ ಬದುಕಿನ ನಡುವೆ ನಡೆಯುವ ಕಥೆ ಹೇಳುತ್ತಿರುವುದು ನನಗೆ ದೊಡ್ಡ ಸವಾಲು ಮತ್ತು ಜವಾಬ್ದಾರಿ’ ಎಂದು ನಿರ್ದೇಶಕ ರೋಹಿತ್ ಪದಕಿ ಹೇಳಿದ್ದಾರೆ. ಚಿತ್ರ ಸಂಪೂರ್ಣ ಉತ್ತರಕರ್ನಾಟಕದ ಸೊಗಡಲ್ಲಿ, ಭಾಷೆಯಲ್ಲಿ ಇರುತ್ತದೆ ಹಾಗೂ ಅಲ್ಲಿಯೇ ಚಿತ್ರೀಕರಣವಾಗಲಿದೆ.

ಅರವಿಂದ ಕಶ್ಯಪ್ ಕ್ಯಾಮೆರಾ, ಚರಣ್ ರಾಜ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ : ಚಾಮರಾಜನಗರ ಸೀಮೆಯಲ್ಲಿ ಗಾಂಧಿಯ ಪ್ರಭಾವ

ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…

45 mins ago

ಇಂದು ಮೈಸೂರಿಗೆ ಮೋದಿ ಆಗಮನ : ವಿವೇಕ ಸ್ಮಾರಕ ಲೋಕಾರ್ಪಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…

54 mins ago

ಗಾಂಧಿ ಅಭಿಯಾನ ಅರಿವಿನ ಯಾನ | ಹೊರದೇಶದ ಭಾಷೆಗಳನ್ನು ಕಲಿತೆ

ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…

60 mins ago

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

16 hours ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

17 hours ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

17 hours ago