ಬೆಂಗಳೂರು : ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.
ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.
ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ
ಹೇಮಂತ್ಕುಮಾರ್ ರೈತ ಸಂಘ-ಕೆಆರ್ಎಸ್ ಪಕ್ಷ, ಎಸ್ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…
ಎಲ್ಲೆಂದರಲ್ಲಿ ಗಿಡ ಗಂಟಿಗಳು, ಕಸದ ರಾಶಿ ಮೈಸೂರು: ಇಲ್ಲಿನ ರಾಜೀವ್ ನಗರದ ಉದ್ಯಾನ ಉದ್ದೇಶಕ್ಕೆ ಬಳಕೆಯಾಗದೆ ಪಾಳು ಬಿದ್ದಿದೆ. ಉದ್ಯಾನದ…
ಹೆಚ್.ಎಸ್. ದಿನೇಶ್ಕುಮಾರ್ ಪಡಿತರ ವಿತರಣೆಯಲ್ಲಿ ರಾಜ್ಯದಲ್ಲೇ ೩ನೇ ಸ್ಥಾನದಲ್ಲಿರುವ ಮೈಸೂರಿನಲ್ಲೂ ಸಮಸ್ಯೆ ಮೈಸೂರು: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕ…
ನವೀನ್ ಡಿಸೋಜ ನಿಗದಿತ ದಿನದಲ್ಲಿ ಪಡಿತರ ದೊರೆಯದೆ ಫಲಾನುಭವಿಗಳ ಪರದಾಟ; ಬೇಕಿದೆ ಶಾಶ್ವತ ಪರಿಹಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪಡಿತರ…
ಚಾಮರಾಜನಗರ ಜಿಲ್ಲೆಯಲ್ಲಿ ಸರ್ವರ್ ಸಮಸ್ಯೆ ಚಾಮರಾಜನಗರ: ಸಾರ್ವಜನಿಕ ಪಡಿತರ ವ್ಯವಸ್ಥೆಯಡಿ (ಪಿಡಿಎಸ್) ನ್ಯಾಯಬೆಲೆ ಅಂಗಡಿ, ಸೊಸೈಟಿಗಳ ಮೂಲಕ ಬಿಪಿಎಲ್ ಮತ್ತು…
ನವದೆಹಲಿ : ಹ್ಯಾಜಲ್ವುಡ್, ಭುವನೇಶ್ವರ್ ಬೌಲಿಂಗ್ ಅಬ್ಬರ, ಸಂಘಟಿತ ಫೀಲ್ಡಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು…