ಚಿತ್ರ ಮಂಜರಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಯೂಟರ್ನ್ ಬೆಡಗಿ

ಬೆಂಗಳೂರು : ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ ಅವರು ಪ್ಯಾನ್ ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಟಾಲಿವುಡ್ ನಟ ವಿಕ್ಟರಿ ವೆಂಕಟೇಶ್ ನಟನೆಯ 75ನೇ ಪ್ಯಾನ್ ಇಂಡಿಯಾ ಸಿನಿಮಾ ‘ಸೈಂಧವ್’ ಭಾರೀ ನಿರೀಕ್ಷೆ ಹೆಚ್ಚಿಸಿದೆ. ಶೈಲೇಶ್ ಕೋಲನು ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಸದ್ಯ ವೈಜಾಗ್ ನಲ್ಲಿ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ. ನಿಹಾರಿಕಾ ಎಂಟರ್ ಟೈನ್ಮೆಂಟ್ ನಡಿ ವೆಂಕಟ್ ಬೋಯನಪಲ್ಲಿ ನಿರ್ಮಿಸುತ್ತಿರುವ ಸೈಂಧವ್ ಗೆ ಕನ್ನಡತಿ ಶ್ರದ್ದಾ ಶ್ರೀನಾಥ್ ಎಂಟ್ರಿ ಕೊಟ್ಟಿದ್ದಾರೆ. ವಿಕ್ಟರಿಗೆ ವೆಂಕಟೇಶ್ ಗೆ ಜೋಡಿಯಾಗಿ ನಟಿಸ್ತಿರುವ ಮೂಗುತಿ ಸುಂದರಿಯ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ.

ಸೈಂಧವ್ ಸಿನಿಮಾದಲ್ಲಿ ಶ್ರದ್ದಾ ಮನೋಜ್ಞಾ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಅವರ ಫಸ್ಟ್ ಲುಕ್ ನೋಡುಗರ ಗಮನಸೆಳೆಯುತ್ತಿದೆ. ಸೀರೆಯುಟ್ಟು ಹೋಮ್ಲಿ ಲುಕ್ ಕಾಣಿಸಿಕೊಂಡಿರುವ ಶ್ರದ್ದಾ, ಕೈಯಲ್ಲಿ ಟಿಫನ್ ಬಾಕ್ಸ್ ಹಿಡಿದು ಗಂಭೀರ ಆಲೋಚನೆಯಲ್ಲಿ ತೊಡಗಿದ್ದಾರೆ. ಜೆರ್ಸಿ ಸಿನಿಮಾದಲ್ಲಿ ಅದ್ಭುತ ಅಭಿಯನ ಪ್ರದರ್ಶಿಸಿದ್ದ ಶ್ರದ್ದಾ ಶ್ರೀನಾಥ್, ಸೈಂಧವ್ ಸಿನಿಮಾದಲ್ಲಿ ಮತ್ತೊಮ್ಮೆ ಎಲ್ಲರ ಗಮನಸೆಳೆಯಲಿದ್ದಾರೆ.

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಈ ಚಿತ್ರದ ಮೂಲಕ ಸೌತ್ ಸಿನಿರಂಗ ಪ್ರವೇಶಿಸಿದ್ದಾರೆ. ತಾಂತ್ರಿಕವಾಗಿಯೂ ಶ್ರೀಮಂತಿಕೆಯಿಂದ ಕೂಡಿರುವ ಸೈಂಧವ್ ಸಿನಿಮಾಗೆ ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ, ಎಸ್ ಮಣಿಕಂದನ್ ಛಾಯಾಗ್ರಹಣ, ಗ್ಯಾರಿ ಬಿಎಚ್ ಸಂಕಲನ ಮತ್ತು ಅವಿನಾಶ್ ಕೊಲ್ಲ ನಿರ್ಮಾಣ ವಿನ್ಯಾಸ ಮಾಡಿದ್ದು, ಕಿಶೋರ್ ತಲ್ಲೂರ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೀಘ್ರದಲ್ಲೇ ಇತರ ಪಾತ್ರವರ್ಗ ರಿವೀಲ್ ಮಾಡಲಿರುವ ಚಿತ್ರತಂಡ, ಸೈಂಧವ್ ಸಿನಿಮಾವನ್ನು ಡಿಸೆಂಬರ್ 22 ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದೆ

lokesh

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

15 mins ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

17 mins ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

19 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

22 mins ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

30 mins ago