ಚಿತ್ರ ಮಂಜರಿ

ನಿಶ್ಚಿತಾರ್ಥಕ್ಕೆ ಅಂತ್ಯವಾಡಿದ ವೈಷ್ಣವಿ ಗೌಡ

ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್​ ಸಿನಿಮಾದ ನಟ ವಿದ್ಯಾಭರಣ್​ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ- ಪ್ರತ್ಯಾರೋಪ ಚರ್ಚೆಯಾಗುತ್ತಿದ್ದು, ಇದರಿಂದ ಮನನೊಂದಿರುವ ವೈಷ್ಣವಿ ಗೌಡ ಇನ್​ಸ್ಟಾಗ್ರಾಂ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

“” ನಾವು ಇದನ್ನು ಇಲ್ಲಿಗೆ ಕೈಬಿಡುತ್ತಿದ್ದೇವೆ. ಈ ವಿಷಯವನ್ನು ಮತ್ತೆ ಎಳೆಯಬೇಡಿ, ಇಲ್ಲಿಗೆ ಬಿಡಿ ಎಂದು ಎಲ್ಲರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರ ಶುಭಹಾರೈಕೆಗೆ ಧನ್ಯವಾದಗಳುʼʼ ಎಂದು ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ. “” ನಾನು, ವಿದ್ಯಾಭರಣ್ ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಎರಡು ಕುಟುಂಬದವರು ಮಾತನಾಡಿಕೊಂಡಿದ್ದೆವು ಅಷ್ಟೇ. ಮದುವೆ ಬಗ್ಗೆ ನಾವಿನ್ನೂ ಯಾವ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಈಗಲೇ ಎಲ್ಲ ವಿಷಯ ತಿಳಿದಿದ್ದು ಗೊತ್ತಾಗಿದೆ. ಹಾಗಾಗಿ ನಾನು ಈ ಬಗ್ಗೆ ಮುಂದೆ ಹೆಜ್ಜೆ ಇಡೋದಿಲ್ಲʼʼ ಎಂದು ವೈಷ್ಣವಿ ಗೌಡ ಅವರು ತಿಳಿಸಿದ್ದಾರೆ.


ವಿದ್ಯಾಭರಣ್‌ ಸ್ಪಷ್ಟನೆ

“” ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆʼʼ ಎಂದು ಕಿಡಿಕಾರಿದ್ದಾರೆ.

andolanait

Recent Posts

ನಾಳೆ ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಸಭೆ

ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಸಂಜೆ ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ…

16 mins ago

ಶೌರ್ಯ ಪ್ರಶಸ್ತಿ ಪಡೆದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ: ಏನದು ಗೊತ್ತಾ.?

ನವದೆಹಲಿ: ಕೇಂದ್ರ ಸರ್ಕಾರವು ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯಿಂದ ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣವನ್ನು ಉಚಿತವಾಗಿ ನೀಡಲು…

35 mins ago

ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಅಂಕಾರ: ಇಸ್ತಾನ್‌ಬುಲ್‌ ಬಳಿಯ ಕಪ್ಪು ಸಮುದ್ರದಲ್ಲಿ ಟರ್ಕಿ ನಿರ್ವಹಿಸುತ್ತಿದ್ದ ಕಚ್ಚಾ ತೈಲ ಟ್ಯಾಂಕರ್‌ ಹಡಗಿನ ಮೇಲೆ ದಾಳಿ ನಡೆದಿದೆ. ಕಪ್ಪು…

1 hour ago

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

1 hour ago

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

1 hour ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

2 hours ago