ಚಿತ್ರ ಮಂಜರಿ

ನಿಶ್ಚಿತಾರ್ಥಕ್ಕೆ ಅಂತ್ಯವಾಡಿದ ವೈಷ್ಣವಿ ಗೌಡ

ಬೆಂಗಳೂರು: ತನ್ನ ನಿಶ್ಚಿತಾರ್ಥದ ಬಗ್ಗೆ ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ವೈಷ್ಣವಿ ಗೌಡ ನಿಶ್ಚಿತಾರ್ಥ ಮುರಿದುಕೊಂಡಿರುವುದಾಗಿ ಇನ್​ಸ್ಟಾಗ್ರಾಂ ಸ್ಟೋರಿ ಮೂಲಕ ಖಚಿತಪಡಿಸಿದ್ದಾರೆ. ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವ ವಿರಾಜ್​ ಸಿನಿಮಾದ ನಟ ವಿದ್ಯಾಭರಣ್​ ಸರಿಯಿಲ್ಲ ಎಂದು ಇಬ್ಬರು ಹುಡುಗಿಯರು ಮಾತನಾಡಿರುವ ಆಡಿಯೋ ವೈರಲ್​ ಆದ ಬೆನ್ನಲ್ಲೇ ಮಾಧ್ಯಮಗಳಲ್ಲಿ ಆರೋಪ- ಪ್ರತ್ಯಾರೋಪ ಚರ್ಚೆಯಾಗುತ್ತಿದ್ದು, ಇದರಿಂದ ಮನನೊಂದಿರುವ ವೈಷ್ಣವಿ ಗೌಡ ಇನ್​ಸ್ಟಾಗ್ರಾಂ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

“” ನಾವು ಇದನ್ನು ಇಲ್ಲಿಗೆ ಕೈಬಿಡುತ್ತಿದ್ದೇವೆ. ಈ ವಿಷಯವನ್ನು ಮತ್ತೆ ಎಳೆಯಬೇಡಿ, ಇಲ್ಲಿಗೆ ಬಿಡಿ ಎಂದು ಎಲ್ಲರ ಬಳಿ ಮನವಿ ಮಾಡುತ್ತಿದ್ದೇನೆ. ಎಲ್ಲರ ಶುಭಹಾರೈಕೆಗೆ ಧನ್ಯವಾದಗಳುʼʼ ಎಂದು ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದಾರೆ. “” ನಾನು, ವಿದ್ಯಾಭರಣ್ ನಿಶ್ಚಿತಾರ್ಥ ಮಾಡಿಕೊಂಡಿಲ್ಲ. ಎರಡು ಕುಟುಂಬದವರು ಮಾತನಾಡಿಕೊಂಡಿದ್ದೆವು ಅಷ್ಟೇ. ಮದುವೆ ಬಗ್ಗೆ ನಾವಿನ್ನೂ ಯಾವ ನಿರ್ಧಾರವನ್ನು ತೆಗೆದುಕೊಂಡಿರಲಿಲ್ಲ. ಈಗಲೇ ಎಲ್ಲ ವಿಷಯ ತಿಳಿದಿದ್ದು ಗೊತ್ತಾಗಿದೆ. ಹಾಗಾಗಿ ನಾನು ಈ ಬಗ್ಗೆ ಮುಂದೆ ಹೆಜ್ಜೆ ಇಡೋದಿಲ್ಲʼʼ ಎಂದು ವೈಷ್ಣವಿ ಗೌಡ ಅವರು ತಿಳಿಸಿದ್ದಾರೆ.


ವಿದ್ಯಾಭರಣ್‌ ಸ್ಪಷ್ಟನೆ

“” ವೈಷ್ಣವಿ ಜೊತೆಗೆ ನನ್ನ ನಿಶ್ಚಿತಾರ್ಥ ನಡೆದಿಲ್ಲ. ಎರಡು ಕುಟುಂಬದ ನಡುವೆ ಪ್ರಾಥಮಿಕ ಮಾತುಕತೆಯಾಗಿತ್ತು. ಆದರೆ ಈ ಫೋಟೋ ಎಲ್ಲಿಂದ ವೈರಲ್ ಆಯಿತು ಎನ್ನುವುದು ಗೊತ್ತಿಲ್ಲ. ನಮ್ಮ ಕುಟುಂಬದವರ ವರ್ಚಸ್ಸನ್ನು ಹಾಳು ಮಾಡಲು ಪ್ಲಾನ್ ಮಾಡಿದ್ದಾರೆ. ನಾನು ಯಾವುದೇ ಹುಡುಗಿಯರೊಂದಿಗೆ ತಪ್ಪಾಗಿ ನಡೆದುಕೊಂಡಿಲ್ಲ. ಆಕೆ ನೇರವಾಗಿ ಬಂದು ಆರೋಪವನ್ನು ಮಾಡಬಹುದಿತ್ತು. ನನ್ನ ಮೊದಲ ಫಿಲ್ಮ್ ಬಂದಾಗಲೇ ಇವರು ಆರೋಪ ಮಾಡಬಹುದಿತ್ತು. ಹೆಸರು ಹೇಳಲು ಧೈರ್ಯವಿಲ್ಲದಿರುವ ಆಕೆ ಆರೋಪ ಮಾಡುತ್ತಿದ್ದಾಳೆʼʼ ಎಂದು ಕಿಡಿಕಾರಿದ್ದಾರೆ.

andolanait

Recent Posts

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

13 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

37 mins ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

4 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

4 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

4 hours ago